ಕಯ್ಯೂರಿನ ರೈತ ವೀರರು

Author : ಫಕೀರ್ ಮುಹಮ್ಮದ್ ಕಟ್ಪಾಡಿ

Pages 112

₹ 60.00




Year of Publication: 2010
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ರೈತರ ಶೋಷಣೆಯನ್ನೇ ತಮ್ಮ ಪೋಷಣೆಯನ್ನಾಗಿಸಿಕೊಂಡಿದ್ದ ಬ್ರಿಟಿಷರು ನಡೆಸುತ್ತಿದ್ದ ಸುಲಿಗೆ-ದಬ್ಬಾಳಿಕೆ-ಅಪಮಾನ ಮತ್ತು ಅದರ ವಿರುದ್ಧ ಕಯ್ಯೂರಿನ ರೈತರು ಸಿಡಿದೆದ್ದವರ ರಕ್ತದ ಹೋರಾಟ, ಛಲ-ದುರಂತ ಕತೆಗಳನ್ನು ಈ ಕೃತಿ ಬಿಚ್ಚಿಡುತ್ತದೆ. ಇದು ಕೇವಲ ರೈತರ ಕತೆಯಲ್ಲದೆ ಇತಿಹಾಸ-ರೈತರ ಬಂಡಾಯವನ್ನು ಧ್ವನಿಯಾಗಿಸಿಕೊಂಡಿರುವ ಕತೆ ಇದು.

About the Author

ಫಕೀರ್ ಮುಹಮ್ಮದ್ ಕಟ್ಪಾಡಿ
(25 June 1949)

ಕತೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಮೂಲತಃ ಉಡುಪಿ ಜಿಲ್ಲೆಯ ಬಾರಕೂರಿನವರು. 1949 ಜೂನ್ 25ರಂದು ಜನಿಸಿದರು. ಬಿ.ಕಾಂ. ಪದವೀಧರರಾಗಿದ್ದ ಅವರು ಬ್ಯಾಂಕ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ’ಗೋರಿ ಕಟ್ಟಿಕೊಂಡವರು’, ’ನೋಂಬು’, ’ದಜ್ಜಾಲ’, ’ಅತ್ತರ್ ಹಾಜಿಕ್ ಮತ್ತು ಇತರ ಕತೆಗಳು’, ’ಪಚ್ಚ ಕುದುರೆ’ ಕತಾಸಂಕಲನಗಳು. ನೀಳ್ಗತೆಗಳ ಸಂಕಲನ ’ಕಡವು ಮನೆ’ ಹಾಗೂ ’ಸರಕುಗಳು’ ಮತ್ತು ’ಕಚ್ಚಾದ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ’ಬೇರೂತಿನಿಂದ ಜರುಸಲೇಮಿಗೆ (2010) ಮತ್ತು ಮಂಟೋ ಬರೆದ ದೇಶ ವಿಭಜನೆಯ ಕತೆಗಳು’ ಅನುವಾದ ಕೃತಿಗಳು. ’ಕಯ್ಯೂರಿನ ರೈತವೀರರು’, ’ರಾಷ್ಟ್ರೀಯತೆ ಮತ್ತು ಮುಸ್ಲಿಮರು’, ’ಸೂಫಿ ಸಂತರು’ ...

READ MORE

Related Books