ಕೆಂಡದ ನಡುವೆ

Author : ವಿ. ಮುನಿವೆಂಕಟಪ್ಪ

Pages 64

₹ 5.00




Year of Publication: 1983
Published by: ಬಂಡಾಯ ಪ್ರಕಾಶನ
Address: ಅರೆ ಅಂಗಡಿ, ತಾಲೂಕು ಹೊನ್ನಾವರ, ಉತ್ತರ ಕನ್ನಡ ಜಿಲ್ಲೆ.

Synopsys

ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಪ್ರಥಮ ಕವನ ಸಂಕಲನ-ಕೆಂಡದ ನಡುವೆ. ಮೊದಲಿನಿಂದಲೂ ದಲಿತರ ಶೋಷಣೆ ವಿರುದ್ಧ ಪ್ರತಿಭಟಿಸುತ್ತಲೇ ಬಂದಿದ್ದ ಲೇಖಕರು, ಕವನಗಳ ಮೂಲಕ ತಮ್ಮ ಕೋಪವನ್ನು ವ್ಯಕ್ತ ಮಾಡಿದ್ದಾರೆ. ಖ್ಯಾತ ಕವಿ ಸಿದ್ಧಲಿಂಗಯ್ಯ ಅವರು ಕೃತಿಗೆ ಬೆನ್ನುಡಿ ಬರೆದು ‘ದಲಿತ ಜಗತ್ತಿನ ಅನುಭವವನ್ನು ಕಾವ್ಯ ಜಗತ್ತಿಗೆ ವರ್ಗಾಯಿಸಿದ್ದಾರೆ. ಇಲ್ಲಿಯ ಕವಿತೆಗಳು ಸಿಟ್ಟು ಮತ್ತು ಸಂಕಟಗಳನ್ನು ತೊಟ್ಟು ನಿಂತಿವೆ’ ಎಂದು ಪ್ರಶಂಸಿಸಿದ್ದಾರೆ. ಕಾಳೇಗೌಡ ನಾಗವಾರ ಅವರು ಮುನ್ನುಡಿ ಬರೆದು ‘ಕವಿತೆಗಳ ಸಾಲುಗಳು ನಿರಾಡಂಬರವಾಗಿವೆ. ಇದೇ ಕವಿತೆಗಳ ಸೌಂದರ್ಯವೂ ಆಗಿದೆ’ ಎಂದು ಶ್ಲಾಘಿಸಿದ್ದಾರೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books