ಕೆರೆಮನೆ ಶಂಭು ಹೆಗಡೆ ಅಧ್ಯಯನ

Author : ಜಿ.ಎಸ್. ಭಟ್

Pages 445

₹ 250.00




Year of Publication: 2004
Published by: ನಿಧಿ ಪ್ರಕಾಶನ
Address: ಅಕ್ಷರ, ವಿನೋಬಾ ನಗರ, ಸಾಗರ, ಶಿವಮೊಗ್ಗ, ಕರ್ನಾಟಕ- 577401

Synopsys

‘ಕೆರೆಮನೆ ಶಂಭು ಹೆಗಡೆ ಅಧ್ಯಯನ’ ಯಕ್ಷಗಾನ ಕಲಾವಿದ ಕೆರೆಮನೆ ಶಂಭು ಹೆಗಡೆ ಅವರ ಕಲಾಬದುಕಿನ ಅಧ್ಯಯನಾತ್ಮಕ ಕೃತಿ. ಈ ಕೃತಿಯನ್ನು ಜಿ.ಎಸ್. ಭಟ್ಟ ಅವರು ರಚಿಸಿದ್ದಾರೆ. ಕೆರೆಮನೆ ಶಂಭು ಹೆಗಡೆ ಯಕ್ಷಗಾನರಂಗದಲ್ಲಿ ಒಬ್ಬ ವ್ಯಕ್ತಿಯಲ್ಲ, ಒಂದು ಶಕ್ತಿ. ಏಕವ್ಯಕ್ತಿ ಸಂಸ್ಥೆ, ಪ್ರತಿಭೆ, ಸಂಘಟನಾ ಸಾಮರ್ಥ್ಯ, ಕಲೆಗಾರಿಕೆ ಈ ಮೂರರಲ್ಲೂ ಮೊದಲ ದರ್ಜೆಯ ಸಾಮರ್ಥ್ಯವುಳ್ಳ ಅಪೂರ್ವ ಕಲಾವಿದ. ಅವರ ಕಲಾ ಬದುಕಿನ ಕುರಿತಾದ ಅಧ್ಯಯನಾತ್ಮಕ ಕೃತಿ

About the Author

ಜಿ.ಎಸ್. ಭಟ್

ಹಿರಿಯ ಲೇಖಕ ಜಿ.ಎಸ್ ಭಟ್ (ಸಾಗರ) 1944ರಲ್ಲಿ ಹೊನ್ನಾವರದ ಗಜನಿ ಮಠದಲ್ಲಿ ಜನಿಸಿದರು. ಸಾಗರದ ಲಾಲ ಬಹುದ್ದೂರ್ ಶಾಸ್ತ್ರೀ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನಿವೃತ್ತರಾಗಿರುವ ಜಿ.ಎಸ್ ಭಟ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಮತ್ತು ಪರಿಣತಿ ಹೊಂದಿರುವರು. ಇವರು ಯಕ್ಷಗಾನ ಕುರಿತ ಸಂಶೋಧನಾ ಲೇಖನಗಳು, ಕತೆ, ಕವಿತೆ, ಅಂಕಣಗಳಲ್ಲಿ ತಮ್ಮ ಸಾಹಿತ್ಯ ಕೃಷಿಯನ್ನು ಮಾಡಿದ್ದಾರೆ. ರಂಗಭೂಮಿ, ಯಕ್ಷಗಾನ ವಿದ್ವಾಂಸರಾಗಿರುವ ಅವರು ಸಾಂಸ್ಕೃತಿಕ, ಸಂಘಟಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.  ಕೃತಿಗಳು: ಕುಮಾರವ್ಯಾಸನ ಕರ್ಣಾಟಭಾರತ ಕಥಾ ಮಂಜರಿ ಪ್ರವೇಶ, ರಾಘವಾಂಕನ ಹರಿಶ್ಚಂದ್ರಕಾವ್ಯ ಪ್ರವೇಶ, ಅಕ್ಕಮ್ಮಜ್ಜಿಯ ಗಂಡನೂ ವಾಣಾಸಜ್ಜನ ಹೆಣ್ತಿಯೂ, ಕೆರೆಮನೆ ಶಂಭು ಹೆಗಡೆ ಅಧ್ಯಯನ, ಪಾವೆಂ ಕಸ್ತೂರಿ, ಮಂಜೀ ಮಹಾದೇವನ ಗಂಜೀ ಪುರಾಣ, ನೆನಪಿನ ರಂಗಸ್ಥಳ,    ...

READ MORE

Related Books