ಖೋತಿ

Author : ಎನ್. ಗಾಯತ್ರಿ (ಬೆಂಗಳೂರು)

Pages 148

₹ 125.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು - 560 001
Phone: 080-30578020/22

Synopsys

ಈ ಗ್ರಂಥದ ಮೂಲ ಕರ್ತೃ ಚಂದ್ರಕಾಂತ ಅಧಿಕಾರಿಯವರು ಡಾ|| ಬಾಬಾಸಾಹೇಬ ಅಂಬೇಡ್ಕರರ ನಿಕಟವರ್ತಿಗಳಾಗಿದ್ದವರು. ಸ್ವತಃ ವಕೀಲರು ಮತ್ತು ಕೊಂಕಣದಲ್ಲಿ ಖೋತಿ ವ್ಯವಸ್ಥೆಯ ವಿರುದ್ಧದ ಹೋರಾಟಗಳಲ್ಲಿ ಅಗ್ರಪಂಕ್ತಿಯಲ್ಲಿದ್ದವರು. ಆದ್ದರಿಂದ ಈ ಕೃತಿಯು ವಿಶೇಷ ಅಧಿಕೃತತೆಯನ್ನು ಪಡೆದುಕೊಂಡಿದೆ. ಅಂದಿನ ಅಪೂರ್ವ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಬೇರೆ ನಾಯಕರಾರೂ ತಮ್ಮ ನೇರ ಭಾಗವಹಿಸುವಿಕೆಯನ್ನು ಮತ್ತು ಅಂದಂದಿನ ಹೋರಾಟದ ವಿಕಾಸವನ್ನು ಇಷ್ಟು ಸಮಗ್ರವಾಗಿ ದಾಖಲಿಸಲಿಲ್ಲ. 

ಡಾ|| ಅಂಬೇಡ್ಕರ್‌ ಅವರು ಬೌದ್ಧಮತವನ್ನು ಸ್ವೀಕರಿಸಿದ ತರುವಾಯದಲ್ಲಿ ಶ್ರೀ ಚಂದ್ರಕಾಂತ ಅಧಿಕಾರಿ ಸಹ ಬೌದ್ಧಮತಾವಲಂಬಿಯಾಗಿದ್ದವರು. ಅಂಬೇಡ್ಕರ್‌ ಅವರು ಸ್ಥಾಪಿಸಿದ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಲಿಯ ಸದಸ್ಯರಾಗಿ ಚಂದ್ರಕಾಂತ ಅಧಿಕಾರಿ ತಮ್ಮ ಜೀವನ ಪರ್ಯಂತ ಹಲವಾರು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಈ ಕೃತಿಯನ್ನು ಎನ್. ಗಾಯತ್ರಿಯವರು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.  

About the Author

ಎನ್. ಗಾಯತ್ರಿ (ಬೆಂಗಳೂರು)
(17 January 1957)

ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. 1957 ರ ಜನೆವರಿ 17 ರಂದು ಜನನ. ಸಾಹಿತ್ಯದಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವೀಧರರು. ರಿಸರ್ವ್ ಬ್ಯಾಂಕಿನಲ್ಲಿ ಅಧಿಕಾರಿ.ಮಹಿಳಾ ಪರ ಚಿಂತಕಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು ಮಹಿಳಾ ಹೋರಾಟಗಳಿಗೆ ಸೈದ್ಧಾಂತಿಕ ನೆಲೆ ಕಲ್ಪಿಸಿಕೊಟ್ಟವರು. ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.  ಕೃತಿಗಳು 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ...

READ MORE

Related Books