ಮಾನವ ಕಾಳಜಿಯ ಆಶಯಗಳಿಗೆ ಪ್ರಖರವಾದ ಭಾಷೆಯ ಎರಕವೂ ಹೊಯ್ದು ಕತೆಯನ್ನು ಪರಿಣಾಮಕಾರಿಯಾಗಿಸಿದ ಕೃತಿ-ಕಿಬ್ಬದಿಯ ಕಿಲುಳುಕಿ. ಸುತ್ತಮುತ್ತ ನಡೆಯುವ ಘಟನಾವಳಿಗಳಿಗೆ ಸೂಕ್ಷ್ಮ ಸಂವೇದನೆಯೊಂದಿಗೆ ಸ್ಪಂದಿಸುತ್ತ ಕರಾಳ ಮುಖಗಳನ್ನು ಅನಾವರಣಗೊಳಿಸುವ ಕಥೆಗಳು ಜೀವಪರ ಚಿಂತನೆಗೆ ಓದುಗರನ್ನು ಪ್ರೇರೇಪಿಸುತ್ತವೆ.
ಚನ್ನಪ್ಪ ಅಂಗಡಿ ಅವರು ಎಮ್ ಎಸ್ ಸಿ (ಕೃಷಿ) ಸಹಾಯಕ ಕೃಷಿ ನಿರ್ದೇಶಕರಾಗಿದ್ದಾರೆ. ಇವರು ಜನಿಸಿದ್ದು15.04.1970, ಬಮ್ಮನಹಳ್ಳಿ ಹಾವೇರಿ ಜಿಲ್ಲೆಯಲ್ಲಿ. ಮಂದ ಬೆಳಕಿನ ಸಾಂತ್ವನ, ಭೂಮಿ ತಿರುಗುವ ಶಬ್ದ (ಕವನಸಂಕಲನ), ಮಣ್ಣಿನೊಳಗಣ ಮರ್ಮ, ಕಿಬ್ಬದಿಯ ಕೀಲುಳುಕಿ (ಕಥಾಸಂಕಲನ), ಎದೆಯ ಒಕ್ಕಲಿಗ (ವೈಚಾರಿಕ), ಕೃಷಿ ಕಾರಣ ಸಂಪಾದನೆ : ಮಡಿಲು, ಕಾಯಕಯೋಗಿ, ಕದಂಬ, ಬಿತ್ತೋಣ ಹತ್ತಿ ಬೆಳೆಯೋಣ, ಗಿಡಗಂಟೆಗಳ ಕೊರಳು ಕೃತಿಗಳನ್ನು ರಚಿಸಿದ್ದಾರೆ. ಭೂಚೇತನ ಪ್ರಶಸ್ತಿ , ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ಕಾವ್ಯ), ಮುದ್ದಣ ರತ್ನಾಕರವರ್ಣಿ ಅನಾಮಿಕ (ಕಸಾಪ) ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ...
READ MORE