ಕಿರುವೆರಳ ಸೆಟೆ

Author : ಶ್ರೀಧರ ಹೆಗಡೆ ಭದ್ರನ್‍

Pages 96

₹ 75.00




Year of Publication: 2017
Published by: ಅಭಿನವ ಪ್ರಕಾಶನ
Address: # 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 08023505825

Synopsys

ಮಧ್ಯಕಾಲೀನ ಕನ್ನಡ ಕಾವ್ಯ ಕೃತಿಗಳಲ್ಲಿ ರತ್ನಾಕರ ವರ್ಣಿಯ ಭರತೇಶ ವೈಭವಕ್ಕೆ ಅನನ್ಯವಾದ ಸ್ಥಾನವಿದೆ. ಅದರ ದೇಸಿ ಸ್ವರೂಪ ಹಾಗೂ ಕಾವ್ಯೋನ್ಮಾದಗಳು ವಿಶಿಷ್ಟ. ಆ ಕಾವ್ಯದ ಒಂದು ಭಾಗವನ್ನು ಆಯ್ದು ಲೇಖಕರು ’ಕಿರುವೆರಳ ಸೆಟೆ’ ಕೃತಿ ರಚಿಸಿದ್ದು, ಈ ಕೃತಿಯು ತನ್ನ ನಾಟಕೀಯ ಗುಣಗಳಿಂದಾಗಿ ಕಾವ್ಯಲೋಕದಲ್ಲಿ ಗಮನ ಸೆಳೆಯುತ್ತಿದೆ. ಸಾಹಿತ್ಯ ಕಾರಣಕ್ಕಾಗಿ ಓದಿ ಆಸ್ವಾದಿಸುವ ಕೃತಿಯಾಗಿದೆ. ಸರಳ ಗದ್ಯದ ಅನುವಾದ, ಪೀಠಿಕೆ, ಸೂಕ್ತ ಟಿಪ್ಪಣಿ ಮುಂತಾದ ಶಾಸ್ತ್ರಶುದ್ಧ ಸಂಪಾದನೆಯ ನೆಲೆಯಲ್ಲಿ ಕೃತಿಯನ್ನು ಸಿದ್ಧಪಡಿಸಲಾಗಿದೆ.

About the Author

ಶ್ರೀಧರ ಹೆಗಡೆ ಭದ್ರನ್‍
(01 November 1977)

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನಲ್ಲಿ ಜನನ. ಮೂರೂರು. ಕುಮಟಾ, ಧಾರವಾಡಗಳಲ್ಲಿ ವಿದ್ಯಾಭ್ಯಾಸ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಥಮ ರಾಂಕ್‌ನಲ್ಲಿ ಬಂಗಾರದ ಪದಕಗಳೊಂದಿಗೆ ಕನ್ನಡ ಎಂ.ಎ., ಪ್ರಶಸ್ತಿ ಸಹಿತ ಪ್ರಥಮ ವರ್ಗದಲ್ಲಿ ಪ್ರಾಚ್ಯಲೇಖನ ಅಧ್ಯಯನ, ಬಸವ ಅಧ್ಯಯನ, ಟ್ರಾನ್ಸ್‌ಲೇಷನ್, ಜೈನಶಾಸ್ತ್ರಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ. ಆಧುನಿಕ ಕನ್ನಡ ಮಾಹಾಕಾವ್ಯಗಳು-ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ. ಹೊನ್ನಾವರದ ಎಸ್.ಡಿ.ಎಂ. ಪದವಿ ಕಾಲೇಜು, ಧಾರವಾಡದ ಜೆ.ಎಸ್.ಎಸ್.ಶಿಕ್ಷಣ ಸಂಸ್ಥೆಗಳಲ್ಲಿ, ಕರ್ನಾಟಕ ವಿಶ್ವವಿದ್ಯಾಲಯದ ಜೈನಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಕನಕ ಅಧ್ಯಯನ ಪೀಠಗಳಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿಯಲ್ಲಿ ಹಂಗಾಮಿ ವಾರ್ತಾವಾಚಕ, ಪ್ರಸ್ತುತ ಧಾರವಾಡ ತಾಲೂಕಿನ ನಿಗದಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ...

READ MORE

Related Books