ಸಾಸಿವೆ ಕಾಳಲ್ಲಿ ಸಾಸಿರ ಕಥೆ ಸಾರಿದ ಕಿಸಾಗೋತಮಿಗೆ ಮತ್ತು ಇತರೆ ಬೆಳಕಿನ ಕಥೆಗಳು-ಈ ಕೃತಿಯನ್ನು ಲೇಖಕ ಸಿ.ಎಚ್. ರಾಜಶೇಖರ ರಚಿಸಿದ್ದು,25 ಬಿಡಿ ಸಂಪುಟಗಳ ಸಮಗ್ರ ಬುದ್ಧ ಸಾಹಿತ್ಯ ಮಾಲೆಯಡಿ ಪ್ರಕಟಿಸಲಾಗಿದೆ. ಜಗತ್ತಿನ ಸರ್ವಶ್ರೇಷ್ಠ ಕಥೆಗಳೆಂದು ಪರಿಗಣಿಸಲಾಗುವ ಅಮರ ಜಾತಕ ಕಥೆಗಳ ಸಂದೇಶ ಇಲ್ಲಿವೆ. ಇವು ಸಮಗ್ರ ಮತ್ತು ಸಮ್ಯಕ್ ದೃಷ್ಠಿಕೋನದಿಂದ ಕೂಡಿದ ಪರಿಪೂರ್ಣ ಕಥೆಗಳಾಗಿವೆ. ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ.