ಲೇಖಕ ಬಿ. ಪ್ರಭಾಕರ ಶಿಶಿಲ ಅವರ ಸಂಶೋಧನಾ ಆಧಾರಿತ ಕೃತಿ ಕೊಡಗು-ಕೆನರಾ ರೈತ ಬಂಡಾಯ-1837. 1837ರಲ್ಲಿ ಬ್ರಿಟೀಷರ ವಿರುದ್ಧ ಕನ್ನಡ ಮ್ತು ಕೊಡಗು ಜಿಲ್ಲೆಯ ರೈತರು ದೊಡ್ಡ ರೀತಿಯಲ್ಲಿ ಬಂಡೆದ್ದರು. ಮಂಗಳೂರನ್ನು ವಶಪಡಿಸಿ ಎರಡು ವಾರಗಳ ಪರ್ಯಂತ ಆಡಳಿತ ನಡೆಸಿದರು. ಬಳಿಕ ಬ್ರಿಟೀಷರ ಒಡೆದು ಆಳುವ ನೀತಿಗೆ ಬಲಿಯಾಗಿ ಸೋಲುಂಡರು. ಈ ಘಟನೆಗೆ ಅಮರ ಸುಳ್ಯದ ಸ್ವಾತಂತ್ಯ್ರ, ಕೊಡಗು ಕೆನರಾ ಬಂಡಾಯ, ಕಲ್ಯಾಣಪ್ಪನ ಕಾಟಕಾಯಿ ಎಂಬಿತ್ಯಾದಿ ಹೆಸರುಗಳಿವೆ. ಇದರ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಿ, ಈ ಕೃತಿಯನ್ನು ರಚಿಸಲಾಗಿದೆ.
ಲೇಖಕ ಡಾ. ಪ್ರಭಾಕರ ಶಿಶಿಲ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸಾಹಿತ್ಯದತ್ತ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅರ್ಥಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಕೃತಿಗಳು: ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು. ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರ ...
READ MORE