ಕೊಂಕಣಿಚೆ ಮಹಾಕಾವ್ಯ ಶ್ರೀರಾಮಚರಿತ

Author : ಅರವಿಂದ ಚಂದ್ರಕಾಂತ ಶ್ಯಾನಭಾಗ

Pages 56

₹ 21.00




Year of Publication: 2019
Published by: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ
Address: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ,
Phone: 08242453167

Synopsys

ಕೊಂಕಣಿಯ ಮಹಾಕವಿ ವಿಶ್ವನಾಥ ಶೇಟ್, ಹಾರ್ಸಿಕಟ್ಟಾ ಇವರು ಭಾಮಿನಿ ಷಟ್ಪದಿಯಲ್ಲಿ ಬರೆದಿರುವ ಕನ್ನಡ ಲಿಪಿಯಲ್ಲಿರುವ ಶ್ರೀರಾಮಚರಿತ ಮಹಾಕಾವ್ಯ ಕುರಿತಾದ ಅಂಶಗಳನ್ನು ಕುರಿತು ನಿಬಂಧ ರೂಪವಾಗಿ ಅರವಿಂದ ಶ್ಯಾನಭಾಗರು ದೇವನಾಗರಿ ಲಿಪಿಯಲ್ಲಿ ಬರೆದಿದ್ದಾರೆ. ಈ ಪುಸ್ತಕವು ಕೊಂಕಣಿ ಭಾಷೆಯಲ್ಲಿದ್ದು ರಾಮಾಯಣ ಮಹಾಕಾವ್ಯದ ಆರಂಭದಿಂದ ಯುದ್ಧಕಾಂಡದ ವರೆಗಿನ ವಿಚಾರಗಳನ್ನು ಸಂಕ್ಷಿಪ್ತವಾಗಿ ಚರ್ಚಿಸಿದ್ದಾರೆ.

About the Author

ಅರವಿಂದ ಚಂದ್ರಕಾಂತ ಶ್ಯಾನಭಾಗ
(05 March 1982)

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಂಸ್ಕೃತ ಸಾಹಿತ್ಯದಲ್ಲಿ ಮೂರು ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಎಂ.ಎ. ಪಡೆದಿದ್ದು, ಪಿಎಚ್ ಡಿ ಪದವೀಧರರು- ಅರವಿಂದ ಚಂದ್ರಕಾಂತ ಶ್ಯಾನಭಾಗ, ಗಾಂಧಿ ಅಧ್ಯಯನ ಮತ್ತು ಜೈನಶಾಸ್ತ್ರ ಅಧ್ಯಯನ ಸ್ನಾತಕೋತ್ತರ ಡಿಪ್ಲೊಮಾ ಪದವೀಧರರು. ಇವರು ಹವ್ಯಾಸಿ ಬರಹಗಾರರು. ಈವರೆಗೆ ಕನ್ನಡ ಮತ್ತು ಕೊಂಕಣಿಯಲ್ಲಿ 9 ಪುಸ್ತಕಗಳನ್ನು ಪ್ರಕಟಿಸಿದ್ದು, 300 ಕ್ಕೂ ಹೆಚ್ಚು ಲೇಖನಗಳನ್ನು ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ವಿಜಯಪುರ, ಧಾರವಾಡ, ಮಂಗಳೂರು ಮತ್ತು ಕಾರವಾರ ಆಕಾಶವಾಣಿ ಕೇಂದ್ರಗಳಿಂದ ಇವರ ಚಿಂತನ, ಭಾಷಣ ಮತ್ತು ಸಂಸ್ಕ್ರತ ಪಾಠ ಮುಂತಾದ ಕಾರ್ಯಕ್ರಮಗಳು ಪ್ರಸಾರಗೊಂಡಿವೆ. ಕರಾವಳಿ ಮುಂಜಾವು ಮತ್ತು ಕನ್ನಡ ಜನಾಂತರಂಗ ದಿನಪತ್ರಿಕೆಗಳಲ್ಲಿ ...

READ MORE

Related Books