ಕೃಷಿ ವ್ಯವಸ್ಥೆಯಲ್ಲಿ ಮಾನವ ಸಂಪನ್ಮೂಲ

Author : ಎ.ಎಸ್. ಕುಮಾರಸ್ವಾಮಿ

Pages 137

₹ 80.00




Year of Publication: 2004
Published by: ಕೃಷಿ ಕಿರಣ
Address: ಶಿವಮೊಗ್ಗ

Synopsys

ಭಾರತದ ಅರ್ಥವ್ಯವಸ್ಥೆಯ ತಳಪಾಯವಾಗಿರುವ ಕೃಷಿ ಹಾಗೂ ಈ ವ್ಯವಸ್ಥೆಯಲ್ಲಿ ಮಾನವ ಸಂಪನ್ಮೂಲದ ಬಳಕೆ ಕುರಿತು ಕೃತಿಯು ಮಾಹಿತಿ ಒದಗಿಸುತ್ತದೆ. ಗ್ರಾಮೀಣ ಜನರು ನಗರಗಳತ್ತ ಉದ್ಯೋಗ ಅರಸಿ ಬರುತ್ತಿರುವ ಈ ಸಂದರ್ಭದಲ್ಲಿ ಕೃಷಿಗೆ ಅಗ್ಯತ್ಯವಿರುವ ಮಾನವ ಸಂಪನ್ಮೂಲ, ಅದರ ಪ್ರಾಮುಖ್ಯತೆ, ಕೃಷಿ ಪೂರಕ ಉದ್ಯೋಗಗಳು, ರೈತರ ಆತ್ಮಹತ್ಯೆ ಮುಂತಾದ ಹಲವಾರು ವಿಷಯಗಳ ಕುರಿತು ಈ ಕೃತಿಯು ಚರ್ಚಿಸುತ್ತದೆ.

ಕೃಷಿಯ ಪ್ರಸ್ತುತ ಜಾಗತಿಕ ಪರಿಸ್ಥಿತಿ, ಕೃಷಿಕನ ಬದುಕು, ಕೃಷಿ ಕಾರ್ಮಿಕ, ಇತರೆ ಮಾನವ ಸಂಪನ್ಮೂಲ, ಕೃಷಿ ಕ್ಷೇತ್ರದಲ್ಲಿ ಸಹಕಾರ, ಕೃಷಿಕರ ಆತ್ಮಹತ್ಯೆ ವಿಷಯಗಳ ಕುರಿತು ಕೂಲಂಕಷವಾಗಿ ಚರ್ಚಿಸುತ್ತದೆ.

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books