ಕೃಷಿವಿಜ್ಞಾನ ಸಾಹಿತ್ಯ ನಡೆದು ಬಂದ ಹಾದಿ

Author : ಜೆ.ಬಾಲಕೃಷ್ಣ

Pages 60

₹ 40.00




Year of Publication: 2010
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022372388

Synopsys

ಮಾನವ ಸಂಸ್ಕೃತಿ ಹಾಗೂ ನಾಗರಿಕತೆಗಳ ಮೂಲ ಸೆಲೆಯಾಗಿರುವ ಕೃಷಿ, ರೈತನಿಗೆ ಜೀವನೋಪಾಯದ ವಿಧಾನವಷ್ಟೇ ಆಗಿರದೇ, ದಿನನಿತ್ಯದ ಸಾಂಸ್ಕೃತಿಕ ಜೀವನದ ವಿಧಾನವಾಗಿತ್ತು. ಜಾಗತೀಕರಣದಿಂದಾಗಿ ಇಂದು ಕೃಷಿಯ ರೂಪುರೇಷೆಗಳಲ್ಲಿ ಮಹತ್ತರ ಬದಲಾವಣೆಗಳನ್ನು ಕಾಣುತ್ತಿದ್ದೇವೆ.  ಈ ಕೃತಿಯು ಕೃಷಿವಿಜ್ಞಾನ ಸಾಹಿತ್ಯದ ಕುರಿತು ಅರಿವು ಮೂಡಿಸುತ್ತದೆ. ಕೃಷಿವಿಜ್ಞಾನ ಸಾಹಿತ್ಯದ ಅವಲೋಕನ ಕೃಷಿ ಎಂಬ ಸಂಸ್ಕೃತಿಯ ಚಲನೆಯ ಪರಾಮರ್ಶೆ ಈ ಕೃತಿಯಲ್ಲಿದೆ.

About the Author

ಜೆ.ಬಾಲಕೃಷ್ಣ

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ. ...

READ MORE

Related Books