ಕೃಷಿಯಲ್ಲಿ ಬೌದ್ಧಿಕ ಆಸ್ತಿ ಹಕ್ಕು ಹಾಗೂ ಸಾಂಪ್ರದಾಯಕ ಜ್ಞಾನ

Author : ಜೆ.ಬಾಲಕೃಷ್ಣ

Pages 80

₹ 54.00




Published by: ಕನ್ನಡ ಅಧ್ಯಾಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ
Address: ಹೆಬ್ಬಾಳ, ಬೆಂಗಳೂರು-560024

Synopsys

ಈ ಕೃತಿಯು ನ್ಯಾಯಯುತವಲ್ಲದ ಬೌದ್ಧಿಕ ಆಸ್ತಿ ಹಕ್ಕು ನೀತಿಗಳ ವಿರುದ್ಧ, ಜೈವಿಕಚೌರ್ಯದ ವಿರುದ್ಧ ಹಾಗೂ ಜೈವಿಕ ಸಂಪನ್ಮೂಲಗಳ ಮತ್ತು ಸಂಬಂಧಿತ ಸಾಂಪ್ರದಾಯಕ ಜ್ಞಾನದ ಖಾಸಗಿ ಏಕಸ್ವಾಮ್ಯವನ್ನು ವಿರೋಧಿಸುತ್ತದೆ. ಇಲ್ಲಿರುವ ಪ್ರಶ್ನೆ ‘ಅಂತರಾಷ್ಟ್ರೀಯ ಬೌದ್ಧಿಕ ಆಸ್ತಿ ಹಕ್ಕುಗಳ ನೀತಿಯನ್ನು ಇಲ್ಲಿ ಯಶಸ್ವಿಯಾಗಿ ಅಳವಡಿಸುವುದು ಹೇಗೆ? ಎನ್ನುವುದಲ್ಲ ಬದಲಿಗೆ, ‘ಸುಸ್ಥಿರ ಅಭಿವೃದ್ಧಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಪೂರಕವಾಗಬಲ್ಲವೆ?’ ಎಂಬುದು. ಇಲ್ಲಿ ಸುಸ್ಥಿರ ಅಭಿವೃದ್ಧಿ ಎಂದರೆ, ಜೈವಿಕ ವೈವಿಧ್ಯತೆ ಮತ್ತು ಸಂಬಂಧಿತ ಸಾಂಪ್ರದಾಯಕ ಜ್ಞಾನಗಳ ಸಂರಕ್ಷಣೆ, ಜೈವಿಕ ವೈವಿಧ್ಯತೆಯ ಸುಸ್ಥಿರ ಬಳಕೆ ಹಾಗೂ ಈ ಜೈವಿಕ ವೈವಿಧ್ಯತೆಯ ಮೇಲೆ ಅವಲಂಬಿತವಾಗಿರುವ ಸಮುದಾಯಗಳ ಜೀವನಾಧಾರ ಪೋಷಣೆ ಮತ್ತು ಎಲ್ಲ ಸಮುದಾಯಗಳ ಸಮಾನ ಅಭಿವೃದ್ಧಿ. ಭಾರತದ ಬೌದ್ಧಿಕ ಆಸ್ತಿ ಹಕ್ಕು ವ್ಯವಸ್ಥೆಯು ಅಂತರರಾಷ್ಟ್ರೀಯ ಬೌದ್ಧಿಕ ಆಸ್ತಿ ಹಕ್ಕುಗಳ ವ್ಯವಸ್ಥೆಯೊಂದಿಗೆ ನೇರ ಸಂಪರ್ಕಹೊಂದಿದ್ದು, ಅಂತರರಾಷ್ಟ್ರೀಯ ಬೌದ್ಧಿಕ ಆಸ್ತಿ ಹಕ್ಕುಗಳ ವ್ಯವಸ್ಥೆಯು ಇನ್ನೂ ಸಂಪೂರ್ಣವಾಗಿ ರೂಪುಗೊಳ್ಳದೇ ಇರುವುದರಿಂದ ಭಾರತವು ಕ್ಷಿಪ್ರ ಅಂತರರಾಷ್ಟ್ರೀಯ ಬೆಳವಣಿಗೆಗಳೊಂದಿಗೆ ಹೇಗೆ ತನ್ನನ್ನು ಗುರುತಿಸಿಕೊಳ್ಳುತ್ತದೆ ಎನ್ನುವುದು ಸ್ಥಳೀಯ ಶಾಸನ ಮತ್ತು ತಳಮಟ್ಟದ ವಿಧಾನಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಎಲ್ಲ ಪ್ರಶ್ನೆ, ಸಂದೇಹಗಳಿಗೆ ಈ ಕೃತಿಯಲ್ಲಿ ಉತ್ತರ ದೊರಕಿಸಿಕೊಡಲು ಪ್ರಯತ್ನಿಸಲಾಗಿದೆ.

About the Author

ಜೆ.ಬಾಲಕೃಷ್ಣ

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ. ...

READ MORE

Related Books