ಕುಂಭದ್ರೋಣ

Author : ಹಾಡ್ಲಹಳ್ಳಿ ನಾಗರಾಜ್

Pages 100

₹ 80.00




Year of Publication: 2016
Published by: ನಿರಂತರ ಪ್ರಕಾಶನ
Address: 165 ನೆಲ ಮಹಡಿ, 8ನೇ ಎ ಅಡ್ಡರಸ್ತೆ, 14 ಎ ಮುಖ್ಯ ರಸ್ತೆ, ಆರ್.ಪಿ.ಸಿ ಬಡಾವಣೆ, ಬೆಂಗಳೂರು 560040
Phone: 9886830331

Synopsys

‘ಕುಂಭದ್ರೋಣ’ ಹಿರಿಯ ಲೇಖಕ ಹಾಡ್ಲಹಳ್ಳಿ ನಾಗರಾಜ್ ಅವರ ಕಥಾ ಸಂಕಲನ. ಇಲ್ಲಿ ಗ್ರಾಮೀಣ ಬದುಕಿನ ಸಂವೇದನೆಗಳನ್ನೊಳಗೊಂಡ ಅಪರೂಪದ ಕತೆಗಳು ಸಂಕಲನಗೊಂಡಿವೆ. ಹಳ್ಳಿಗಾಡಿನ ಸೊಗಡನ್ನು ಇಲ್ಲಿಯ ಕತೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ ಲೇಖಕರು.

About the Author

ಹಾಡ್ಲಹಳ್ಳಿ ನಾಗರಾಜ್

ಹಾಡ್ಲಹಳ್ಳಿ ನಾಗರಾಜು ಅವರು ಮೂಲತಃ ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಗ್ರಾಮದವರು. ತಂದೆ- ಗುರುಶಾಂತೇಗೌಡರು, ತಾಯಿ- ಪುಟ್ಟಮ್ಮ. ಕಡುಬಡತನದ ರೈತಾಪಿ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ ಪದವೀಧರರಾಗಿದ್ದು, ಎನ್.ಸಿ.ಸಿ ಇಲಾಖೆಯಲ್ಲಿ 36 ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಯಿಂದಾಗಿ ಮುಖ್ಯಮಂತ್ರಿಗಳ ಶ್ಲಾಘನಾಪತ್ರಕ್ಕೆ ಪಾತ್ರರಾಗಿದ್ದಾರೆ. ಎನ್.ಸಿ.ಸಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಂತರ ಅದೇ ಇಲಾಖೆಯಲ್ಲಿ ಗೆಜೆಟೆಡ್ ಅಧಿಕಾರಿಯಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಹಾಸನ ನಗರ ಸಮೀಪ ಅತ್ತಿಹಳ್ಳಿ ಎಂಬ ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪಟ ಮಲೆನಾಡಿನ ಪರಿಸರದಲ್ಲಿ ಹುಟ್ಟಿಬೆಳೆದ ನಾಗರಾಜು ಅವರು ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪುಮೂಡಿಸಿದ್ದಾರೆ. ...

READ MORE

Related Books