‘ಕುರುಕ್ಷೇತ್ರ’ ಜಗದೀಶಶರ್ಮಾ ಸಂಪ ಅವರ ಕಾದಂಬರಿಯಾಗಿದೆ. ಹದಿನೆಂಟು ದಿನದ ಯುದ್ಧ, ಹದಿನೆಂಟು ಅಕ್ಷೌಹಿಣೀ ಸೈನ್ಯ, ಅತಿರಥ-ಮಹಾರಥರ ಘನೋಪಸ್ಥಿತಿ, ಐದು ತಲೆಮಾರಿನ ಯೋಧರ ಸಮ್ಮಿಲನ, ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ, ಆನೆ-ಕುದುರೆಗಳ ಲೆಕ್ಕವಿಲ್ಲ, ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ ಇದು ಕುರುಕ್ಷೇತ್ರದ ಯುದ್ಧದ ಕಥೆ, ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ, ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.
ಜಗದೀಶ ಶರ್ಮಾ ಸಂಪ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಸಂಪ ಗ್ರಾಮದವರು. ತಂದೆ - ಚಿದಾನಂದ ಭಟ್ಟ, ತಾಯಿ- ಮಂಗಳಗೌರಿ. ಗೋಕರ್ಣದ ಶ್ರೀದಕ್ಷಿಣಾಮೂರ್ತಿ ವೇದಭವನ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಕೃಷ್ಣಯಜುರ್ವೇದ ಕ್ರಮಾಂತ ಅಧ್ಯಯನ ಮಾಡಿದ್ದಾರೆ. ಆನಂತರ, ಮೈಸೂರಿನ ಶ್ರೀಮನ್ಮಹಾರಾಜ ಸಂಸ್ಕೃತ ಮಹಾ ಪಾಠಶಾಲೆಯಲ್ಲಿ ಅಲಂಕಾರಶಾಸ್ತ್ರದಲ್ಲಿ ವಿದ್ವತ್ ಪದವಿ, ಅದ್ವೈತ ವೇದಾಂತ, ನ್ಯಾಯವೈಶೇಷಿಕ, ಸಾಂಖ್ಯಯೋಗ ಧರ್ಮಶಾಸ್ತ್ರಗಳಲ್ಲಿ ವಿಶೇಷ ಅಧ್ಯಯನ ಮಾಡಿದ್ದಾರೆ. ಕರ್ನಾಟಕ ಮುಕ್ತವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ರಾಷ್ಟ್ರಮಟ್ಟದ ಸಂಸ್ಕೃತ ವಾಕ್ಪ್ರತಿಯೋಗಿತಾದಲ್ಲಿ ಎರಡು ಬಾರಿ ಸ್ವರ್ಣಪದಕ ಪಡೆದಿದ್ದಾರೆ. ರಾಷ್ಟ್ರಮಟ್ಟದ ವೇದ ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದಾರೆ. ಸಂಸ್ಕೃತಿ ಪರಿಚಯಿಸುವ, ನೈತಿಕಮೌಲ್ಯಗಳನ್ನು ...
READ MORE