ಕುವೆಂಪು ಕಾವ್ಯ-ಸಂಸ್ಕೃತಿ ಚರಿತ್ರೆಯ ರೂಪಕ

Author : ನರಹಳ್ಳಿ ಬಾಲಸುಬ್ರಹ್ಮಣ್ಯ

Pages 100

₹ 95.00




Year of Publication: 2012
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004

Synopsys

ಹಿರಿಯ ವಿಮರ್ಶಕ ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕುವೆಂಪು ಅವರ ಸಮಗ್ರ ಕಾವ್ಯವನ್ನು ವಿಶ್ಲೇಷಣೆಗೆ ಒಳಪಡಿಸಿದ್ದಾರೆ. ಕುವೆಂಪು ಅವರ ಕವಿತೆ, ಮಹಾಕಾವ್ಯ ಸೇರಿದಂತೆ ಎಲ್ಲ ಕಾವ್ಯ ಕೃತಿಗಳ ಬಗ್ಗೆ ನರಹಳ್ಳಿ ಅವರು ಚರ್ಚಿಸಿದ್ದಾರೆ. ವಿಭಿನ್ನ ಒಳನೋಟಗಳಿರುವ ಈ ಕೃತಿಯು ಕುವೆಂಪು ಕಾವ್ಯಾಸಕ್ತರಿಗೆ ಮಾರ್ಗಸೂಚಿಯಾಗಿದೆ.

About the Author

ನರಹಳ್ಳಿ ಬಾಲಸುಬ್ರಹ್ಮಣ್ಯ
(05 September 1953)

ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.  ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...

READ MORE

Related Books