ಕುವೆಂಪು ನುಡಿತೋರಣ

Author : ಬಿ.ಆರ್. ಸತ್ಯನಾರಾಯಣ

Pages 128

₹ 60.00




Year of Publication: 2018
Published by: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ
Address: ಕುಪ್ಪಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ 
Phone: 8265230166

Synopsys

ಸುಮಾರು ಹನ್ನೊಂದು ಸಾವಿರ ಪುಟಗಳಷ್ಟಿರುವ ಕುವೆಂಪು ಅವರ ಸಾಹಿತ್ಯದಿಂದ ಆಯ್ದ ಸುಮಾರು ಆರನೂರು ಸೂಕ್ತಿಗಳನ್ನು ಇಲ್ಲಿ ಸಂಪಾದಿಸಲಾಗಿದೆ.  ಈ ನುಡಿಗಳನ್ನು ವೈಚಾರಿಕತೆ, ದರ್ಶನ, ಸೃಜನಶೀಲತೆ, ಪ್ರಕೃತಿ, ರಾಷ್ಟ್ರೀಯತೆ, ನಾಡುನುಡಿ ಮತ್ತು ಬದುಕು ಎಂದು ವಿಭಾಗಿಸಿ ಕೊಡಲಾಗಿದೆ. ಕೊನೆಯಲ್ಲಿ ಕುವೆಂಪು ವಿರಚಿತ ರೈತಗೀತೆ, ನಾಡಗೀತೆ ಮತ್ತು ವಿಶ್ವಮಾನವ ಸಂದೇಶವನ್ನು ನೀಡಲಾಗಿದೆ. ಕೆಲವು ಅಪೂರ್ವವಾದ ಛಾಯಾಚಿತ್ರಗಳನ್ನು ನೀಡಲಾಗಿದೆ.

About the Author

ಬಿ.ಆರ್. ಸತ್ಯನಾರಾಯಣ

ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್‍. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...

READ MORE

Related Books