ಕುವೆಂಪು ಸಾಹಿತ್ಯ ಕೆಲವು ಅಧ್ಯಯನಗಳು

Author : ಪ್ರಧಾನ್ ಗುರುದತ್ತ

Pages 112

₹ 95.00




Year of Publication: 2018
Published by: ಸಪ್ನ ಬುಕ್ ಹೌಸ್
Address: ಗಾಂಧಿನಗರ, ಬೆಂಗಳೂರು

Synopsys

ಕುವೆಂಪು ಅವರ ಸಾಹಿತ್ಯ ಕುರಿತು ಪ್ರಧಾನ ಗುರುದತ್ತ ಅವರು ಬರೆದಿರುವ ವಿಮರ್ಶಾತ್ಮಕ ಟಿಪ್ಪಣಿಗಳು ಈ ಪುಸ್ತಕದಲ್ಲಿವೆ. ಕವಿಯಾಗಿ ಜನಪ್ರಿಯರಿರುವ ಕುವೆಂಪು ನಾಟಕ, ಕಾದಂಬರಿ ರಚನೆಯಲ್ಲಿಯೂ ತಮ್ಮದೇ ಛಾಪು ಮೂಡಿಸಿದವರು. ಕುವೆಂಪು ಸಾಹಿತ್ಯದ ವೈಶಿಷ್ಟ್ಯ ಹಾಗೂ ಮಹತ್ವಗಳನ್ನು ಕುರಿತು ಪ್ರಧಾನ ಗುರುದತ್ತ ಅವರ ಒಳನೋಟಗಳು ಗಮನ ಸೆಳೆಯುತ್ತವೆ. ಕುವೆಂಪು ಸಾಹಿತ್ಯದಲ್ಲ ಅಧ್ಯಯನ ಮಾಡಬಯಸುವವರಿಗೆ ಇದು ಮಹತ್ವದ ಗ್ರಂಥ.

About the Author

ಪ್ರಧಾನ್ ಗುರುದತ್ತ
(30 May 1938)

ಲೇಖಕ, ಅನುವಾದಕ ಪ್ರಧಾನ್ ಗುರುದತ್‌ ಅವರು ಹುಟ್ಟಿದ್ದು 30-05-1938ರಂದು ಚಿಕ್ಕಬಳ್ಳಾಪುರದಲ್ಲಿ.  ಮೈಸೂರಿನಲ್ಲಿ ಉನ್ನತ ಶಿಕ್ಷಣ ಪಡೆದ ಅವರು ಕನ್ನಡದಲ್ಲಿ ಎಂ.ಎ.ಆನರ್ಸ್, ಅನುವಾದದಲ್ಲಿ ಎಂ.ಎ., ಜೊತೆಗೆ ಪ್ರೊ.ವೆಂಕಟರಾಮಪ್ಪನವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ. ಪಿಎಚ್.ಡಿ ವಿಷಯವಾಗಿ ಕೃಷ್ಣ ಕಥೆಯ ಉಗಮ ಮತ್ತು ವಿಕಾಸ. ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ. ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ. ಕುವೆಂಪು ಕನ್ನಡ ಅಧ್ಯಯನಪೀಠದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ 1998ರಲ್ಲಿ ನಿವೃತ್ತರಾಗಿದ್ದಾರೆ. ಬಹುಮುಖ ಪ್ರತಿಭೆ, ಅಪರೂಪದ ಪ್ರಾಧ್ಯಾಪಕರು, ಬಹುಭಾಷಾಪಂಡಿತರು ಆಗಿರುವ ಪ್ರಧಾನ್ ಗುರುದತ್ತರು 150ಕ್ಕೂ ಮಿಗಿಲಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸುಮಾರು ...

READ MORE

Related Books