ಎಂ. ಆರ್. ವಿಠಲ್

Author : ಎನ್.ಎಸ್. ಶ್ರೀಧರಮೂರ್ತಿ

Pages 70

₹ 30.00




Year of Publication: 2009
Published by: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
Address: 28, ಮೊದಲನೇ ಮುಖ್ಯರಸ್ತೆ, ಕ್ರೆಸೆಂಟ್ ರೋಡು, ಹೈಗ್ರೌಂಡ್ಸ್, ಬೆಂಗಳೂರು- 560001

Synopsys

ಎಂ.ಆರ್. ವಿಠಲ್ ಅವರು ಕನ್ನಡ ಚಿತ್ರರಂಗದ ದಿಗ್ಗಜರ ಸಾಲಿಗೆ ಸೇರಿದವರು. ಅವರು ನಿರ್ದೇಶನದ ಚಿತ್ರಗಳಲ್ಲಿ ಕಾಣುವ ಸದಭಿರುಚಿ, ನವಿರು ನಿರೂಪಣೆ, ಹೃದಯ ಸ್ಪರ್ಶಿ ಸನ್ನಿವೇಶಗಳ ಸಂಯೋಜನೆ ವಿಶಿಷ್ಟವಾದುದು. ಅವರ ಕುರಿತಾಗಿ ಮಾಹಿತಿ ಮತ್ತು ವಿಶ್ಲೇಷಣೆಗಳ ಸಮ್ಮಿಲನದಲ್ಲಿ ಲೇಖಕ ಶ್ರೀಧರಮೂರ್ತಿ ಅವರು ಬಹಳ ಅರ್ಥಪೂರ್ಣವಾಗಿ ಈ ಕೃತಿ ರಚಿಸಿದ್ದಾರೆ. ಕನ್ನಡ ಚಿತ್ರರಂಗದ ಮಾಹಿತಿಗಳನ್ನು ನೆನಪಿನಲ್ಲಿ ನೆಲೆಗೊಳಿಸಿಕೊಂಡ ಬರಹಗಾರರೂ, ಪತ್ರಕರ್ತರೂ ಆದ ಶ್ರೀಧರಮೂರ್ತಿ ಅವರು ವಿಠಲ್ ಅವರ ಕಲಾಬದುಕಿನ ಕುರಿತಾಗಿ ಈ ಕೃತಿಯಲ್ಲಿ ವಿವರಿಸಿದ್ದಾರೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books