ಮಾರ್ಜಾಲ ಸನ್ಯಾಸಿ ಮತ್ತು ಭೂಮಿಗಿಳಿದು ಬಂದ ಭಗವಂತ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 304

₹ 190.00

Buy Now


Year of Publication: 2017
Published by: ಹೇಮಂತ ಸಾಹಿತ್ಯ
Address: ನಂ.972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು-560060
Phone: 23507170

Synopsys

ಖ್ಯಾತ ಕಾದಂಬರಿಕಾರ ಅ.ನ.ಕೃಷ್ಣರಾಯರು ಬರೆದ ಸಾಮಾಜಿಕ ಕಾದಂಬರಿ-ಮಾರ್ಜಾಲ ಸನ್ಯಾಸಿ ಮತ್ತು ಭೂಮಿಗಿಳಿದ ಭಗವಂತ. ಧಾರ್ಮಿಕ ಸೋಗಿನಲ್ಲಿ ಸಾಮಾಜಿಕ ವ್ಯವಸ್ಥೆಯೊಂದರ ವಂಚನೆಯನ್ನು ಬಯಲು ಮಾಡುವ ಹಾಗೂ ಇಂತಹ ವಂಚನೆಯ ಜಾಲ ಭೇದಿಸಲು ಸ್ವತಃ ಭಗವಂತನೇ ಬರಬೇಕೇನೋ ಎಂಬ ವ್ಯಂಗ್ಯ ಇಲ್ಲಿಯ ಕಥಾ ವಸ್ತು. ಧಾರ್ಮಿಕತೆಯ ಹೆಸರಿನಲ್ಲಿ ನಡೆಯುವ ಎಲ್ಲ ಅನಾಚಾರಗಳನ್ನು ಈ ಕಾದಂಬರಿಯು ಖಂಡಿಸುತ್ತಲೇ ಸಾಗುತ್ತದೆ. ಕಾದಂಬರಿಯ ನಿರೂಪಣಾ ಶೈಲಿಯು ಓದುಗರನ್ನು ಸೆಳೆಯುತ್ತದೆ. .

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books