ಮಹಾನ್ ಮಾನವತಾವಾದಿ ಕಾರ್ಲ್ ಮಾರ್ಕ್ಸ್

Author : ಜಿ. ರಾಮಕೃಷ್ಣ

Pages 48

₹ 30.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

2015 ಹಾಗೂ 2016ರಲ್ಲಿ ಕ್ರಮವಾಗಿ ಮೊದಲ ಹಾಗೂ ಎರಡನೇ ಮುದ್ರಣ ಕಂಡ ’ಮಹಾನ್ ಮಾನವತಾವಾದಿ ಕಾರ್ಲ್ ಮಾರ್ಕ್ಸ್’ ಕೃತಿಯನ್ನು ಡಾ. ಜಿ. ರಾಮಕೃಷ್ಣ ಅವರು ಬರೆದಿದ್ದು, ಡಾ. ನಾ. ಸೋಮೇಶ್ವರ ಸಂಪಾದಿಸಿದ್ದಾರೆ. ಮಾರ್ಕ್ಸ್ನ ಜೀವಿತಾವಧಿಯಲ್ಲೇ ಕಮ್ಯುನಿಸಂ ಸಿದ್ಧಾಂತವನ್ನು ವಿರೋಧಿಸುವವರೂ ಇದ್ದರು. ಕಳೆದ ದಶಕದಲ್ಲಿ ಅಮೆರಿಕ ಹಾಗೂ ಯೂರೋಪದಲ್ಲಿ ಆರ್ಥಿಕ ಹಿಂಜರಿತವಾಗುತ್ತಿದ್ದಂತೆ ಮಾರ್ಕ್ಸ್ನ ಸಿದ್ಧಾಂತಗಳನ್ನು ಹಾಗೂ ’ಬಂಡವಾಳ’ ಕೃತಿಯನ್ನು ಓದಲು ಆರಂಭಿಸಿದ್ದು ರಹಸ್ಯವೇನಲ್ಲ. ಮಾರ್ಕ್ಸ್ನ ಚಿಂತನೆಗಳೊಂದಿಗೆ ಇಡೀ ಜೀವನ ಚಿತ್ರಣ ನೀಡುವ ಈ ಕೃತಿ ಸರಳ ಭಾಷೆಯಲ್ಲಿ ಲೇಖಕರು ನಿರೂಪಿಸಿದ್ದಾರೆ.

About the Author

ಜಿ. ರಾಮಕೃಷ್ಣ

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ. ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ...

READ MORE

Related Books