ಮಹಾಮಾತೆ ಕುನ್ತೀ ಕಂದೆರೆದಾಗ

Author : ಕೆ.ಎಸ್‍. ನಾರಾಯಣಾಚಾರ್ಯ

Pages 168

₹ 150.00




Year of Publication: 2015
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ
Phone: 9448110031

Synopsys

ಕುನ್ತಿ ಸ್ವಗತದಂತೆ ಹೇಳುವ ಈ ಆತ್ಮಕಥೆಯಲ್ಲಿ ಆಕೆಯ ನ್ಯಾಯಾನ್ಯಾಯದ ಜಿಜ್ಞಾಸೆ ಇದೆ. ಸುಖಾಂತ-ದುರಂತಗಳ ದೃಷ್ಟಾಂತಗಳಿವೆ, ಉರಿ-ಸಿರಿ, ನಗೆ-ಕಂಬನಿ, ವಂಚನೆ-ವಿವಂಚನೆ, ಕಾಠಿಣ್ಯ-ಮಾರ್ದವತೆ, ಸರಳತೆ-ವಕ್ರತೆ, ನಿಯೋಗ-ವಿಯೋಗ, ಹೀಗೆ ಅನೇಕ ವಿಚಾರಗಳನ್ನು ಈ ಕೃತಿ ತೆರೆದಿಡುತ್ತದೆ. ಮಹಾಭಾರತ ಕಥೆಯನ್ನಾಧರಿಸಿದ ಆತ್ಮಕಥಾರೂಪೀ ಕಾದಂಬರಿ ಓದುಗನನ್ನು ಸೆಳೆಯುತ್ತದೆ. 

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books