ಮಹಾಪ್ರಸ್ಥಾನ ಸಂಪುಟ-1

Author : ಮನು (ಪೆನುಗೊಂಡೆ ನರಸಿಂಹರಂಗನ್‌)

Pages 664

₹ 360.00




Year of Publication: 2010
Published by: ಕಾವ್ಯಶ್ರೀ ಪ್ರಕಾಶನ,
Address: 'ಷರೀಫ್, ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದ ಮುಂಭಾಗ, ಮುಸ್ಬಾ ಗಾರ್ಡನ್, ಭಟ್ಕಳ, ಉತ್ತರ ಕನ್ನಡ –581320

Synopsys

ಲೇಖಕ ಮನು (ಪನುಗೊಂಡೆ ನರಸಿಂಹರಂಗನ್) ಅವರ ಸಮಗ್ರ ಕಥೆಗಳ ಕೃತಿ-ಮಹಾಪ್ರಸ್ಥಾನ ಸಂಪುಟ-1 . ಅಂತಾರಾಷ್ಟ್ರೀಯ, ಧಾರ್ಮಿಕ, ಮನೋವಿಜ್ಞಾನ, ಪತ್ತೇದಾರಿ ಎಂಬ ಪ್ರಕಾರಗಳಲ್ಲಿ ಬರೆದಿರುವ ಕಥೆಗಳನ್ನು ಒಂದು ಕಡೆ ಸೇರಿಸಲಾಗಿದೆ. ಇದರಲ್ಲಿ ಅಂತಾರಾಷ್ಟ್ರೀಯದಂತಹ ಕಥೆಗಳು ಕನ್ನಡ ಸಾಹಿತ್ಯಕ್ಷೇತ್ರದಲ್ಲಿ ಹೆಚ್ಚು ಕಾಣಸಿಗುವುದಿಲ್ಲ. ಲೇಖಕರ ಸಂಬಂಧದಲ್ಲಿ ಬಂದಂತಹ ಮಾಹಿತಿಗಳು, ಘಟನೆಗಳು ಇಲ್ಲಿಯ ಕಥೆಗಳಿಗೆ ಆಧಾರವಾಗಿವೆ. ಕಥಾ ವಸ್ತು, ಸನ್ನಿವೇಶಗಳ ಜೋಡಣೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ ಇತ್ಯಾದಿ ಅಂಶಗಳು ಓದುಗರ ಗಮನ ಸೆಳೆಯುತ್ತವೆ.

About the Author

ಮನು (ಪೆನುಗೊಂಡೆ ನರಸಿಂಹರಂಗನ್‌)
(27 July 1946 - 08 November 2011)

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯಲ್ಲಿ 1946 ರ ಜುಲೈ 27 ರಂದು  ಮನು (ಪೆನುಗೊಂಡೆ ನರಸಿಂಹರಂಗನ್‌) ಜನಿಸಿದರು. ತಂದೆ ಪೆನುಗೊಂಡೆ ದೇಶಿಕಾಚಾರ್ಯರು, ತಾಯಿ ರಂಗನಾಯಕಮ್ಮ. ಮೆಕ್ಯಾನಿಕಲ್‌ ಎಂಜಿನಿಯರರು. ಧಾರವಾಡದ ಕರ್ನಾಟಕ ವಿ.ವಿ.ಯಿಂದ ಬಾಹ್ಯ ವಿದ್ಯಾರ್ಥಿಯಾಗಿ  ಎಂ.ಎ. ಪದವೀಧರರು. ಮೈಸೂರು ವಿಶ್ವವಿದ್ಯಾಲಯದಿಂದ ಎಪಿಗ್ರಫಿ ಡಿಪ್ಲೊಮ ಮತ್ತು ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಪಡೆದ ಎಂ.ಎ. (ಮನಃಶಾಸ್ತ್ರ) ಪದವೀಧರರು. ಮೈಸೂರಿನ ಪ್ಲಾಸ್ಟಿಕ್‌ ಕಾರ್ಖಾನೆಯಲ್ಲಿ. ನಂತರ ಕೆ.ಜಿ.ಎಫ್‌.ನ ಭಾರತ್‌ ಅರ್ಥ್‌‌ಮೂವರ್ಸ್‌ನಲ್ಲಿ ಸಂಶೋಧನಾ ಎಂಜಿನಿಯರಾಗಿ, ಚೆನ್ನೈನ ಬ್ರೇಕ್ಸ್‌ ಇಂಡಿಯಾ ಲಿಮಿಟೆಡ್‌ನಲ್ಲಿ ಪ್ರೊಡಕ್ಷನ್‌ ಎಂಜನಿಯರಾಗಿ,  ಪುಣೆಯ ಆಟೋಮೊಬೈಲ್‌ ರಿಸರ್ಚ್ ಅಸೋಸಿಯೇಷನ್‌ ಆಫ್‌ ಇಂಡಿಯಾದಲ್ಲಿ ಡೆಪ್ಯುಟಿ ಡೈರೆಕ್ಟರ್ , ...

READ MORE

Related Books