ಮಹಾತ್ಮ ಗಾಂಧಿ

Author : ಎಂ. ಅಬ್ದುಲ್ ರೆಹಮಾನ್ ಪಾಷಾ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌, ಎಂಬೆಸಿ ಸೆಂಟರ್‍, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 080-22161900

Synopsys

ದೇಶ ಕಂಡಂತಹ ಅಪ್ರತಿಮ ನಾಯಕ, ದಾರ್ಶನಿಕ ಮತ್ತು ಅಹಿಂಸಾ ತತ್ವ ಪ್ರತಿಪಾದಕ ಮಹಾತ್ಮಾ ಗಾಂಧಿ ಕುರಿತಾಗಿ ಬರೆದಂತಹ ಪುಸ್ತಕವಿದು. ವಿಶ್ವ ಮಾನ್ಯರ ಜೀವನ ಚರಿತ್ರೆ ಮಾಲೆಯಲ್ಲಿ ಕಾಣ ಸಿಗುವಂತಹ ಈ ಪಸ್ತಕದಲ್ಲಿ ಗಾಂಧಿ ತತ್ವಗಳನ್ನು ಸಾಮಾನ್ಯರೂ ತಿಳಿದುಕೊಳ್ಳುವಂತೆ ಮತ್ತು ಅರ್ಥೈಸಿಕೊಳ್ಳಲು ಸುಲಭವಾಗುವ ರೀತಿಯಲ್ಲಿ ನಿರೂಪಿಸಿದ್ದಾರೆ ಲೇಖಕರು. ಮೋಹನದಾಸ ಕರಮಚಂದ ಗಾಂಧಿ ಅವರು ತಮ್ಮ ಜೀವನದಲ್ಲಿ ಪ್ರತಿಪಾದಿಸಿದ ತತ್ವಗಳಾದ ಸತ್ಯ ಮತ್ತು ಅಹಿಂಸೆಗಳನ್ನು ಯಾವ ರೀತಿ ಬದುಕಿ ತೋರಿಸಿದರು ಎಂಬುದನ್ನು ಈ ಪುಸ್ತಕವು ವಿವರಿಸುತ್ತದೆ. ಆಸ್ಪೃಶ್ಯತೆಯನ್ನು ಹೋಗಲಾಡಿಸಲು ಭಾರತದ ಕೆಳವರ್ಗದವರನ್ನು ‘ಹರಿಜನ’ ಎಂದು ಕರೆದು ಉನ್ನತ ಸ್ಥಾನವನ್ನು ನೀಡಿದರು. ಅಪ್ಪಟ ಸಸ್ಯಾಹಾರವನ್ನು ಪ್ರಚಾರ ಮಾಡಿದ ಗಾಂಧೀಜಿ ಉಪವಾಸ ಹಾಗೂ ಮೌನದ ಮಹತ್ವವನ್ನು ಸಾರಿದರು. ಭಾರತೀಯರು ಗಾಂಧಿಯನ್ನು ‘ಬಾಪು’ ಎಂದು, ‘ರಾಷ್ಟ್ರಪಿತ’ ಎಂದು ಕರೆದರು. ಈ ಪುಸ್ತಕದಲ್ಲಿ ಮಹಾತ್ಮ ಗಾಂಧಿಯನ್ನು ಲೇಖಕರು ಸೊಗಸಾಗಿ ಪರಿಚಯ ಮಾಡಿಕೊಟ್ಟಿದ್ದಾರೆ. ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ತತ್ವ ಸಿದ್ಧಾಂತಗಳ ಪರಿಚಯ ಈ ಪುಸ್ತಕದಲ್ಲಿ ಅಡಕವಾಗಿದೆ.

About the Author

ಎಂ. ಅಬ್ದುಲ್ ರೆಹಮಾನ್ ಪಾಷಾ

ಸಿನಿಮಾ, ಮಾಧ್ಯಮ ಮತ್ತು ವಿಜ್ಞಾನಗಳಿಗೆ ಸಂಬಂಧಿಸಿದಂತೆ  ಬರೆಯುವ ಅಬ್ದುಲ್ ರೆಹಮಾನ್ ಪಾಷಾ ಕನ್ನಡ ಲೇಖಕರು. ಗಾಂಧೀ ನೆಹರೂ ಆಯ್ದ ಪತ್ರಗಳು, ಅಭಿವೃದ್ಧಿ ಸಂವಹನ ಕೌಶಲ್ಯಗಳು, ಸರ್ವಾಂಗೀಣ ಬೆಳವಣಿಗೆಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋವೃತ್ತಿ ಪೋಷಕರ ಜವಾಬ್ದಾರಿ, ವೈಜ್ಞಾನಿಕ ಮನೋವೃತ್ತಿ ಮಕ್ಕಳ ಹಕ್ಕು, ಶಿಕ್ಷಕರ ಹೊಣೆ, ನಿಮ್ಮ ಉಚ್ಚಾರಣೆ, ಧ್ವನಿಯನ್ನು ಸುಧಾರಿಸಿಕೊಳ್ಳಿ, ವೈಜ್ಞಾನಿಕ ಮನೋವೃತ್ತಿ ಬೆಳೆಸಿಕೊಳ್ಳುವ ಬಗೆ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ವಿಶ್ವಮಾನ್ಯರು ಜೀವನ ಚರಿತ್ರೆ ಮಾಲೆಯಲ್ಲಿ ಮಹಾತ್ಮ ಗಾಂಧಿ, ಟೀಪು ಸುಲ್ತಾನ, ಜವಾಹರಲಾಲ್ ನೆಹರೂ, ಪ್ರವಾದಿ ಮುಹಮ್ಮದ್ ಕಿರುಹೊತ್ತಿಗೆಗಳು ಮುದ್ರಣ ಕಂಡಿವೆ. ನಂಬಿಕೆ ಮೂಢನಂಬಿಕೆ ವೈಜ್ಞಾನಿಕ ಮನೋವೃತ್ತಿ’ ಕೃತಿಗೆ ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ನ ‘ಕಾವ್ಯನಂದ’ ಪ್ರಶಸ್ತಿ (2015), ಶಿವಮೊಗ್ಗದ ...

READ MORE

Related Books