ಮಹಿಳಾ ಸಾಹಿತ್ಯ ಸಂಪುಟ- ಕಥೆ

Author : ಪದ್ಮಿನಿ ನಾಗರಾಜ್ ಎಸ್.ಪಿ.

Pages 422

₹ 320.00




Year of Publication: 2020
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 560018

Synopsys

‘ಮಹಿಳಾ ಸಾಹಿತ್ಯ ಸಂಪುಟ- ಕಥೆ’ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಸಾಹಿತ್ಯ ಸಂಪುಟ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಈ ಕೃತಿಯ ಪ್ರಧಾನ ಸಂಪಾದಕರು ಡಾ. ಮನು ಬಳಿಗಾರ್. ಕೃತಿಯ ಸಂಪಾಕರು ಪದ್ಮಿನಿ ನಾಗರಾಜು. ಕನ್ನಡ ಲೇಖಕಿಯರ ಅನುಭವ ಲೋಕ, ಆಲೋಚನೆ, ಆಳದ ತಲ್ಲಣ ಮತ್ತು ಪ್ರತಿಭಟನೆಗಳು ಅವರ ಕೃತಿಗಳಲ್ಲಿ ಅಭಿವ್ಯಕ್ತಗೊಂಡ ಬಗೆಯನ್ನು ಈ ಮಹಿಳಾ ಸಂಪುಟಗಳು ಹಿಡಿದು ಇಟ್ಟಿವೆ. ಇದೇ ಮೊದಲ ಬಾರಿ ಅವರ ಬಹುಮುಖ ಅಭಿವ್ಯಕ್ತಿಯನ್ನು ಒಟ್ಟಂದದಲ್ಲಿ ಗ್ರಹಿಸಲು ಅನುವಾಗುವಂತೆ ಈ ಸಂಪುಟಗಳನ್ನು ರೂಪಿಸಲಾಗಿದೆ ಎನ್ನುತ್ತಾರೆ ಮನು ಬಳಿಗಾರ್ .ಜೊತೆಗೆ ಹೆಣ್ಣು ಮತ್ತು ಗಂಡಿನ ಸಂವೇದನೆಗಳ ನಡುವಿನ ಭಿನ್ನತೆಗಳನ್ನು ಮತ್ತು ಸಾಮ್ಯತೆಗಳನ್ನು ಗುರುತಿಸಲು ಈ ಸಂಪುಟಗಳು ನೆರವಾಗುತ್ತವೆ ಎನ್ನುತ್ತಾರೆ.

About the Author

ಪದ್ಮಿನಿ ನಾಗರಾಜ್ ಎಸ್.ಪಿ.
(06 April 1966)

ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಗಂಗಾವತಿ, ಚಿಕ್ಕಮಗಳೂರಿನಲ್ಲಿ ವಿದ್ಯಾಭ್ಯಾಸ. ಸ್ನಾತಕೋತ್ತರ ಹಾಗೂ ಪಿಎಚ್‌.ಡಿ ಪದವಿ ಪಡೆದದ್ದು ಮೈಸೂರು ವಿಶ್ವವಿದ್ಯಾಲಯದಲ್ಲಿ. ಪ್ರಸ್ತುತ 'ರಾಣಿ ಸರಳಾದೇವಿ ಕಾಲೇಜಿನಲ್ಲಿ ಪ್ರಾಧ್ಯಾಪಕಿ ಹಾಗೂ ‘ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. ಅವರ ಅನೇಕ ಲೇಖನ, ಕಥೆ, ಕವಿತೆಗಳು ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅಂಕಣಕಾರ್ತಿಯಾಗಿಯು ಗುರುತಿಸಿಕೊಂಡಿದ್ದಾರೆ. 'ಗೆಳತಿಯಾಗುವುದೆಂದರೆ' (ಕವನ ಸಂಕಲನ), 'ಸಮಾಧಿ ಮೇಲಿನ ಹೂ' (ಕಥಾ ಸಂಕಲನ), 'ಅವ್ವ' (ಲಂಕೇಶರ ಆತ್ಮಚರಿತ್ರೆಯನ್ನು ಆಧರಿಸಿದ ನಾಟಕ), 'ಅರಿವಿನ ಮಾರ್ಗದ ಸೋಪಾನಗಳು-ಅನುಪ್ರೇಕ್ಷೆಗಳು' (ಸಂಶೋಧನೆ), ಕೃಷ್ಣಮೂರ್ತಿ ಕವತ್ತಾರ (ವ್ಯಕ್ತಿಚಿತ್ರ), ಸಮತ್ವ (ಪ್ರಬಂಧ ಸಂಕಲನ) ...

READ MORE

Related Books