ಮನೆ ಮಾತು

Author : ಯತಿರಾಜ್‍ ವೀರಾಂಬುಧಿ

Pages 152

₹ 90.00




Year of Publication: 2010
Published by: ಜಾಗೃತಿ ಪ್ರಿಂಟರ್ಸ್
Address: ನಂ. 56/1-6, ನರಸಿಂಹಯ್ಯ ಗಾರ್ಡನ್, ಕೊಟ್ಟಿಗೆಪಾಳ್ಯ, ಮಾಗಡಿ ಮುಖ್ಯರಸ್ತೆ, ಬೆಂಗಳೂರು - 560091
Phone: 08023583850

Synopsys

‘ಮನೆ ಮಾತು’ ಯತಿರಾಜ್ ವೀರಾಂಬುಧಿ ಅವರ ಲೇಖನಗಳ ಸಂಕಲನ. ಸ್ವಂತ ಮನೆ ಎನ್ನುವುದು ಪ್ರತಿಯೊಬ್ಬನ ಸುಂದರ ಕನಸು. ಅದನ್ನು ಕಟ್ಟುವಾಗ ಅನುಭವಿಸುವ ಕೋಟಲೆಗಳು ಅನೇಕ. ಕೆಲವು ವ್ಯವಸ್ಥೆಯಿಂದ ಉಂಟಾಗುವುವಾದರೆ ಮತ್ತೆ ಕೆಲವು ಸ್ವಯಂಕೃತ. ಒಳ್ಳೆಯ ತೀರ್ಮಾನ ಅನುಭವದಿಂದ ಉಂಟಾದರೆ, ಅನುಭವವು ಕೆಟ್ಟ ತೀರ್ಮಾನದಿಂದ ಬರುತ್ತದೆ. ಮನೆಯ ವಸ್ತುಗಳ ಬಗ್ಗೆ ಮಾತ್ರ ಹೇಳದೆ ಮನೆಯ ಬಗ್ಗೆಯೂ ಹೇಳುವ ಕೃತಿ ಮನೆ ಮಾತು.

About the Author

ಯತಿರಾಜ್‍ ವೀರಾಂಬುಧಿ
(11 August 1957)

ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು-  ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...

READ MORE

Related Books