ಮಂಜಿನಲ್ಲಿ ಮಿಂದ ಪುಷ್ಪ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 192

₹ 150.00




Year of Publication: 2011
Published by: ದಿವ್ಯಚಂದ್ರ ಪ್ರಕಾಶನ
Address: # 6/7, ಕಲಿಕಾ ಸೌಧ, ಪೂರ್ಣಯ್ಯ ಛತ್ರಂ ರಸ್ತೆ, ಕಾರ್ಪೋರೇಶನ್ ವಾರ್ಡ್ ಕಚೇರಿ ಎದುರು, ಬಳೇಪೇಟೆ, ಬೆಂಗಳೂರು-560053
Phone: 09448259595

Synopsys

ಖ್ಯಾತ ಕಾದಂಬರಿಗಾರ್ತಿ ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ) ಅವರು ಬರೆದ ಕಾದಂಬರಿ-ಮಂಜಿನಲ್ಲಿ ಮಿಂದ ಪುಷ್ಪ. ಸಾಮಾಜಿಕ ವಿಷಯ ವಸ್ತುವಾಗಿದ್ದರೂ ಲೇಖಕಿಯು ತಮ್ಮ ಕಲ್ಪನಾ ಸಾಮರ್ಥ್ಯವನ್ನು ಬಳಸಿ ರಚಿಸುವ ಕಾದಂಬರಿಗಳ ಪೈಕಿ ‘ಮಂಜಿನಲ್ಲಿ ಮಿಂದ ಪುಷ್ಪ ಸಹ ಒಂದು. ಕಥೆ ವಸ್ತು, ಪಾತ್ರಗಳ ಸೃಷ್ಟಿ, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳ ಹಿನ್ನೆಲೆಯಲ್ಲಿ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books