ಮಣ್ಣಿನ ಋಣ

Author : ಡಿ ಎನ್. ಕೃಷ್ಣಮೂರ್ತಿ

Pages 292

₹ 0.00




Year of Publication: 2017
Published by: ಪುನಶ್ಚೇತನ ಪ್ರಕಾಶನ
Address: ದೊಡ್ಡಮಾರಗೌಡನಹಳ್ಳಿ, ಮೈಸೂರು ತಾಲ್ಲೂಕು, ಮೈಸೂರು -570026
Phone: 9008149968

Synopsys

ಇದೊಂದು ಗ್ರಾಮೀಣ ಪರಿಸರದ ಕಾದಂಬರಿ. ಈ ಕಾದಂಬರಿಯ ನಾಯಕ ರಾಘವೇಂದ್ರಪ್ಪ ತಾವು ವಿದ್ಯಾವಂತರಾದರೂ ಗ್ರಾಮೀಣ ಪರಿಸರವನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು, ತಾವು ಜನ್ಮ ತಳೆದ ಹಳ್ಳಿಯೇ ತಮ್ಮ ಕರ್ಮಭೂಮಿಯಾಗಬೇಕೆಂದು ಹಂಬಲಿಸುತ್ತಾರೆ. ನಗರ ಜೀವನಕ್ಕಿಂತ ಹಳ್ಳಿಯ ಜೀವನವೇ ಉತ್ತಮ ಎಂಬ ಸಂದೇಶವನ್ನು ಸಾರುತ್ತಾರೆ. ಭಾರತೀಯ ಕೌಟುಂಬಿಕ ವ್ಯವಸ್ಥೆಯ ಹಿರಿಮೆಯನ್ನು, ಒಟ್ಟು ಕುಟುಂಬ ವ್ಯವಸ್ಥೆಯ ಮಹತ್ವವನ್ನು ಎತ್ತಿ ಹಿಡಿಯುತ್ತಾರೆ. ಆಧುನಿಕ ಕೃಷಿ ಪದ್ಧತಿಗಳನ್ನು ಅನುಸರಿಸುತ್ತಿರುವ ರೈತ ಹೇಗೆ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡಿದ್ದಾನೆ ಎಂಬ ನಿಷ್ಠುರ ಸತ್ಯವನ್ನು ಅನಾವರಣಗೊಳಿಸುತ್ತಾರೆ. ಸಿರಿಧಾನ್ಯಗಳಿಂದ ಮನುಷ್ಯನ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ಇಂತಹ ಆದರ್ಶ ವ್ಯಕ್ತಿಯ ಚಿಂತನೆಗಳನ್ನೂ ಅವರ ಜೀವನ ಶೈಲಿಯನ್ನೂ ಅತ್ಯಂತ ಪರಿಣಾಮಕಾರಿಯಾಗಿ ಈ ಕಾದಂಬರಿಯಲ್ಲಿ ಚಿತ್ರಿಸಲಾಗಿದೆ.

About the Author

ಡಿ ಎನ್. ಕೃಷ್ಣಮೂರ್ತಿ
(04 June 1963)

ಡಿ. ಎನ್. ಕೃಷ್ಣಮೂರ್ತಿಯವರು ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಯವರು. ತಂದೆ ಎಸ್. ನಂಜುಂಡಯ್ಯ, ತಾಯಿ ಶಾರದಮ್ಮ. ಸಾಹಿತ್ಯ ವಲಯದಲ್ಲಿ  ಇವರು  ಡಿಎನ್ಕೆ ಎಂದೇ ಪರಿಚಿತರು.  ಕೃತಿಗಳು: ದತ್ತೂರಿಗಿಡ, ಮರೀಚಿಕೆ, ಪರಿವರ್ತನೆ, ಕರ್ಪೂರದ ಗೊಂಬೆ, ಮುಳುಗಿದ ದೋಣಿ,(ಕಿರು ಕಾದಂಬರಿಗಳು), ಜನಮನ (ಪ್ರಬಂಧ ಸಂಕಲನ-ಸಂಪಾದಿತ), ಓಕುಳಿ, ಬೆಳಕು (ಕವನ ಸಂಕಲನ), ಚೈತ್ಯ ಚೈತ್ರ(ಕವನ ಸಂಕಲನ-ಸಂಪಾದಿತ), ರಾಜಯೋಗಿ (ವಚನ ಸಂಕಲನ), ಶಾಂತಿಭೂಮಿ, ತಪಸಹನ, ಸೂರ್ಯಾಸ್ತಮ, ವಸುಂಧರ, ಮಣ್ಣಿನ ಋಣ, ಹೃದಯವಂತ, ಆಕ್ರಂದನ, ಚೈತ್ರಯಾತ್ರೆ, ಗ್ರಾಮಾಂತರ, ಕರ್ಮಭೂಮಿ (ಕಾದಂಬರಿಗಳು), ನೇಸರ (ಕವನ ಸಂಕಲನ), ಕಾವ್ಯ ಕುಸುಮಾಂಜಲಿ-(ಕವನ ಸಂಕಲನ - ಸಂಪಾದಿತ), ಸಂಘರ್ಷಣೆ (ಕಥಾ ಸಂಕಲನ), ಜೀವನದಿ, (ಲೇಖನಗಳು), ಮಹಾಸಾಗರದ ಮುತ್ತುಗಳು (ವ್ಯಕ್ತಿ ಚಿತ್ರಗಳು -ಸಂಪುಟ 1), ಭಾರತದ ಅನರ್ಘ್ಯ ರತ್ನಗಳು- (ವ್ಯಕ್ತಿ ಚಿತ್ರಗಳು - ಸಂಪುಟ 2), ಮಾತೃಭೂಮಿಯ ಮಾಣಿಕ್ಯಗಳು (ವ್ಯಕ್ತಿ ಚಿತ್ರಗಳು - ಸಂಪುಟ 3), ಕನ್ನಡ ಸಾಹಿತ್ಯದ ಸೀಮಾಪುರುಷ (ಮಾಸ್ತಿ ...

READ MORE

Related Books