ಮಣ್ಣಿನಿಂದ ರೇಷ್ಮೆ 

Author : ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)

Pages 56

₹ 6.00




Year of Publication: 1985
Published by: ಶಾರದಾಸುತ ಪ್ರಕಾಶನ, ಬೀದರ

Synopsys

ಬೀದರ್ ಜಿಲ್ಲೆಯ ರೇಷ್ಮೆ ಉದ್ಯಮ ಮಾಹಿತಿ ಇರುವ ಗ್ರಂಥವಿದು ಶಾರದಾಸುತ ಪ್ರಕಾಶನದಿಂದ ಪ್ರಕಟವಾಗಿದೆ.  ಹಿಫ್ಪು ನೇರಳೆ ಬೇಸಾಯದಿಂದ ಪ್ರಾರಂಭಿಸಿ ರೇಷ್ಮೆ ಹುಳು ಸಾಕಾಣಿಕೆವರೆಗಿನ ವಿಧಿ ವಿಧಾನವನ್ನು ವಿವರಿಸಲಾಗಿದೆ. ಪ್ರಾರಂಭಿಕ ರೇಷ್ಮೆ ಬೆಳೆಗಾರರಿಗೆ ಉಪಯುಕ್ತವಾಗುವ ಮಾಹಿತಿ ಒಳಗೊಂಡಿದೆ.  ಈ ಮಾಹಿತಿಯು ಬೀದರ್ ನ ' ಉತ್ತರ ಕರ್ನಾಟಕ ' ದೈನಿಕ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿತ್ತು.
 

About the Author

ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)
(01 June 1954)

’ಕ್ಷಿತಿಜ್ ಬೀದರ್‌’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ  ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ  (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...

READ MORE

Related Books