ಮತ್ತೆ ಮಳೆ ಬರುವ ಮುನ್ನ

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 116

₹ 60.00




Year of Publication: 2000
Published by: ದಲಿತ ಸಾಹಿತ್ಯ ಪರಿಷತ್
Address: ಗದಗ

Synopsys

‘ಮತ್ತೆ ಮಳೆ ಬರುವ ಮುನ್ನ’ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕವನ ಸಂಕಲನ. ತಮ್ಮ ವಿಭಿನ್ನ ಶೈಲಿಯಿಂದ ಕಾವ್ಯದಲ್ಲಿ ಜೀವಂತಿಕೆಯನ್ನು ಕಾಯ್ದುಕೊಳ್ಳುವ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಇಲ್ಲಿನ ಕವಿತೆಗಳಲ್ಲಿ ದಲಿತಲೋಕದ ತಲ್ಲಣಗಳನ್ನು ತಮ್ಮ ತಣ್ಣನೆಯ ಪ್ರತಿರೋಧದೊಂದಿಗೆ ದಾಖಲಿಸಿದ್ದಾರೆ. ಸದಾ ಎಚ್ಚರಿಕೆಯ ಅರಿವಿನೊಂದಿಗೆ ಸಮುದಾಯದ ನೋವುಗಳನ್ನು ಸಮಾಜದೆದುರಿಡುವ ಅವರ ಕವಿತೆಗಳು ದಲಿತಕಾವ್ಯಲೋಕದ ದ್ಯೋತಕಗಳೆನ್ನಬಹುದು.

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books