ಮೇದಾರ ಕೇತಯ್ಯ

Author : ಬಾಲಚಂದ್ರ ಜಯಶೆಟ್ಟಿ

Pages 216

₹ 140.00




Year of Publication: 2014
Published by: ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಪ್ರಕಾಶನ
Address: ಮುಖ್ಯ ಬೀದಿ, ಕಲಬುರಗಿ-585101

Synopsys

ಶರಣ ಮೇದಾರ ಕೇತಯ್ಯ -ಲೇಖಕ ಭಾಲಚಂದ್ರ ಜಯಶೆಟ್ಟಿ ಅವರು ಬರೆದ ಕಾದಂಬರಿ. ಪುರೋಹಿತಶಾಹಿಯನ್ನು ವಿರೋಧಿಸುವ ಹಾಗೂ ಅದರ ವಿರುದ್ಧ ಜನಜಾಗೃತಿ ಮೂಡಿಸುವುದು ಶರಣ ಚಳವಳಿಯ ಪ್ರಮುಖ ಉದ್ದೇಶವಾಗಿತ್ತು. ಈ ಪ್ರಕ್ರಿಯೆಯಲ್ಲಿ ಮೇದಾರ ಕೇತಯ್ಯ ಪಾತ್ರವನ್ನು ನಿರ್ವಹಿಸಿದ ಬಗೆ, ಅವರ ಜೀವನ ಗಾಥೆ, ಪ್ರಜೆಗಳ ಶ್ರಮವನ್ನು ಗೌರವಿಸಿದ ರಾಜಸತ್ತೆಯನ್ನು ಧಿಕ್ಕರಿಸಿ ಶರಣರ ನಾಡಿನ ಆಗಮಿಸುವ ಹಾಗೂ ಬುಟ್ಟಿ, ಮೊರ, ಮಂಕರಿಗಳನ್ನುಹೆಣೆಯುವ ಕಾಯಕದ ಪರಿ ಎಲ್ಲವೂ ಈ ಕಾದಂಬರಿಯಲ್ಲಿ ಚಿತ್ರಿತವಾಗಿದೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books