ಮೊದಲ ನೋಟ, ಗೃಹಪ್ರವೇಶ ಮತ್ತು ರಾಜೇಶ್ವರಿ

Author : ತ.ರಾ.ಸು. (ತ.ರಾ. ಸುಬ್ಬರಾವ್)

Pages 492

₹ 350.00




Year of Publication: 2018
Published by: ಹೇಮಂತ ಸಾಹಿತ್ಯ,
Address: # 972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು

Synopsys

ಖ್ಯಾತ ಕಾದಂಬರಿಕಾರ ತ.ರಾಸು ಅವರ ಮೂರು ಕಾದಂಬರಿಗಳ ಸಂಕಲನ-ಮೊದಲ ನೋಟ, ಗೃಹಪ್ರವೇಶ ಮತ್ತು ರಾಜೇಶ್ವರಿ. ಇತಿಹಾಸವನ್ನು ವರ್ತಮಾನದಲ್ಲಿ ಜೀವ ತುಂಬಿ ಬರೆದಂತೆ ಇರುವ ತರಾಸು ಅವರ ಕಾದಂಬರಿಗಳು ಇಂದಿಗೂ ಓದುಗರ ವರ್ಗವನ್ನು ಕಳೆದುಕೊಂಡಿಲ್ಲ. ಐತಿಹಾಸಿಕ ಕಾದಂಬರಿಗಳನ್ನು ಇವರು ಬರೆಯುವಂತೆ ಮತ್ತೊಬ್ಬ ಲೇಖಕನಿಲ್ಲ ಎಂಬಂತೆ ತರಾಸು ಬರೆದರು. ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಗಳು ಓದುಗರ ಗಮನ ಸೆಳೆಯುತ್ತವೆ.

About the Author

ತ.ರಾ.ಸು. (ತ.ರಾ. ಸುಬ್ಬರಾವ್)
(12 June 1906 - 10 April 1984)

ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...

READ MORE

Related Books