ಮೋಹನದಾಸ ಕರಮಚಂದ ಗಾಂಧಿ ಆತ್ಮಕಥೆ

Author : ಜಿ.ಎಂ. ಕೃಷ್ಣಮೂರ್ತಿ

Pages 350

₹ 280.00




Year of Publication: 2018
Published by: ಸಪ್ನ ಬುಕ್ ಹೌಸ್
Address: #3ನೇ ಮುಖ್ಯ ರಸ್ತೆ, ಗಾಂಧಿನಗರ, ಬೆಂಗಳೂರು
Phone: 08040114455

Synopsys

ಮೋಹನದಾಸ ಕರಮಚಂದ ಗಾಂಧಿ ಆತ್ಮಕಥೆ: ನನ್ನ ಸತ್ಯಶೋಧನೆಯ ಕಥೆ’ ಈ ಕೃತಿಯನ್ನು ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಹಾತ್ಮಗಾಂಧಿ ಅವರು ಮಹಾತ್ಮನಾಗುವ ಮೊದಲು ಅವರು ಎಲ್ಲರಂತೆ ಸಾಮಾನ್ಯರೇ ಆಗಿದ್ದರು. ಆದರೆ, ನಮ್ಮ ಸುತ್ತಮುತ್ತಲಿನ ವಿದ್ಯಮಾನಗಳನ್ನು, ಶೋಷಣೆ-ದಬ್ಬಾಳಿಕೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿ, ಅದನ್ನು ಅಹಿಂಸೆಯ ಮೂಲಕವೇ ವಿರೋಧಿಸಿ, ಪ್ರತಿಭಟಿಸುವುದನ್ನು ತಮ್ಮ ಬದುಕಿನ ಭಾಗವಾಗಿ ಮಾಡಿಕೊಳ್ಳುತ್ತಲೇ ಹಂತಹಂತವಾಗಿ ಹೋರಾಟ ಮಾಡಿ ಮಹಾತ್ಮರಾಗುವ ಪರಿಯನ್ನು ಸ್ವತಃ ಗಾಂಧಿ ಅವರ ಜೀವನ ಚರಿತ್ರೆಯ ಪುಸ್ತಕದಿಂದ ತಿಳಿದು ಬರುತ್ತದೆ. ಯಾವ ಕಾಲಕ್ಕೂ ಅಹಿಂಸೆ, ಶಾಂತಿ ಮಂತ್ರ ಬಿಡಬಾರದು ಎಂಬ ಸಂಕಲ್ಪದೊಂದಿಗೆ ಅವರು ತಮ್ಮ ಬದುಕನ್ನು ಗಟ್ಟಿ ಮಾಡಿಕೊಂಡರು. ಆ ಮೂಲಕವೇ ಭಾರತ ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಿದರು. ದೇಶದಲ್ಲಿರುವ ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಕೋಮು ಸೌಹಾರ್ದತೆ ಕಾಯ್ದುಕೊಳ್ಳಲು ಶ್ರಮಿಸಿದರು. ಇಂತಹ ಸಂಗತಿಗಳು ಓದುಗರ ಮೇಲೆ ಗಂಭೀರ ಪರಿಣಾಮ ಬೀರುವ ಅಂಶಗಳನ್ನು ಒಳಗೊಂಡ ಕೃತಿ ಇದು.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books