ಮೂಢನಂಬಿಕೆಗಳು ಕಾನೂನು ಮತ್ತು ಟೆಲಿವಿಷನ್

Author : ನಾ. ಸೋಮೇಶ್ವರ

Pages 176

₹ 150.00




Year of Publication: 2014
Published by: ಷಡಕ್ಷರಿಸ್ವಾಮಿ ಡಿಗ್ಗಾಂವಕರ ಪ್ರಕಾಶನ

Synopsys

ವೈಜ್ಞಾನಿಕ ಮನೋಪ್ರವೃತ್ತಿ ದೈನಂದಿನ ಬದುಕಿನ ಒಂದು ಭಾಗವಾಗುವಂತೆ ಮಾಡುವ ಮಹತ್ವದ ಜವಾಬ್ದಾರಿ ಮಾಧ್ಯಮ ಕ್ಷೇತ್ರಕ್ಕಿದ್ದು,  ಇಂದು ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಲು ಹೆಚ್ಚು ಒತ್ತು ಕೊಡುತ್ತಿವೆ. ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋವೃತ್ತಿಯ ಬೆಳೆಸುವತ್ತ ಮಾಧ್ಯಮಗಳು ಕೆಲಸ ಮಾಡಿದರೆ ಸಶಕ್ತ ಭಾರತವು ನಿರ್ಮಾಣಗೊಳ್ಳಲು ಸಾಧ್ಯ. ಆದರೆ ಈ ಕಾರ್ಯವನ್ನು ನಿಭಾಯಿಸುವಲ್ಲಿ ಇಂದು ಟೆಲಿವಿಷನ್ ಮಾಧ್ಯಮಗಳು ಯಾವುದೇ ರೀತಿಯ ಸಾಮಾಜಿಕ ಬದ್ಧತೆಯೂ ಇಲ್ಲದೆ ವೈಜ್ಞಾನಿಕ ಮನೋಭಾವಗಳನ್ನು ಬೆಳೆಸುವಂತಹ ಕಾರ್ಯಕ್ರಮಗಳ ಬದಲಿಗೆ ಟಿ.ಆರ್.ಪಿಯ ಬೆನ್ನು ಹತ್ತಿ ರೋಚಕ ಸುದ್ದಿಗಳೊಂದಿಗೆ ಮೂಢನಂಬಿಕೆಗಳನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿವೆ. ಅದರ ತಡೆಗೆ ಸೂಕ್ತ ಕಾನೂನಿನ ಕಡಿವಾಣದ ಅವಶ್ಯಕತೆ ಹಾಗೂ ತಡೆಯುವ ಮಾಹಿತಿ ಕುರಿತು ಲೇಖಕರು ಇಲ್ಲಿ ಚರ್ಚಿಸಿದ್ದಾರೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books