ಮೌಢ್ಯಾಚರಣೆ ನಿಷೇಧ ಕಾಯ್ದೆ ಔಚಿತ್ಯ

Author : ಕೋ. ಚೆನ್ನಬಸಪ್ಪ

Pages 72

₹ 40.00




Year of Publication: 2016
Published by: ಶ್ರೀಅರವಿಂದ ಪ್ರಕಾಶನ
Address: ನಂ. 127, ಬೆಸ್ಟ್ ಆಫ್ ಕಾರ್ಡ್ ರೋಡ್, ಬೆಂಗಳೂರು- 86

Synopsys

‘ಮೌಢ್ಯಾಚರಣೆ ನಿಷೇಧ ಕಾಯ್ದೆ ಔಚಿತ್ಯ’ ವೃತ್ತಿಯಿಂದ ನ್ಯಾಯಾಧೀಶರಾಗಿದ್ದ ಕೋ. ಚೆನ್ನಬಸಪ್ಪ ಅವರು ಮೌಢ್ಯಾಚರಣೆ ನಿಷೇಧ ಕಾಯ್ದೆಯ ಔಚಿತ್ಯವನ್ನು ಈ ಕೃತಿಯಲ್ಲಿ ವಿವರಸಿದ್ದಾರೆ. ಬಹುಚರ್ಚಿತವಾದ ಮೌಢ್ಯಾಚರಣೆ ನಿಷೇಧ ಕಾಯ್ದೆಯಲ್ಲಿ ಏನಿದೆ, ಅದರ ಔಚಿತ್ಯವೇನು ಎಂಬುದರ ಸುದೀರ್ಘ ವಿವರಣೆ ಇಲ್ಲಿದೆ. 

About the Author

ಕೋ. ಚೆನ್ನಬಸಪ್ಪ
(27 February 1922 - 23 February 2019)

ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...

READ MORE

Related Books