ಮೃಗಬೇಟೆ

Author : ಗಿರಿಮನೆ ಶ್ಯಾಮರಾವ್

Pages 240

₹ 200.00




Year of Publication: 2021
Published by: ಗಿರಿಮನೆ ಪ್ರಕಾಶನ
Address: ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ 573134
Phone: 9739525514

Synopsys

ಗಿರಿಮನೆ ಶ್ಯಾಮರಾವ್ ಅವರ ‘ಮೃಗಬೇಟೆ’ ಕೃತಿಯು ಮಲೆನಾಡಿನ ರೋಚಕ ಕತೆಗಳ ಭಾಗ-13. ಕೃತಿಕಾರ ಶ್ಯಾಮರಾವ್ ಅವರೇ ಬೆನ್ನುಡಿಯಲ್ಲಿ ಹೇಳುವಂತೆ ‘ ಇವರು ದುಷ್ಟರು, ಇವರು ಶಿಷ್ಟರು ಎಂದೇನೂ ನೋಡದೆ ಪ್ರಕೃತಿ ಎಲ್ಲರಿಗೂ ಆಶ್ರಯ ಕೊಡುತ್ತದೆ. ಆದರೆ ದುಷ್ಟರು ಕೂಡಾ ಮಾಡಿದ್ದನ್ನು ಅನುಭವಿಸಲೇ ಬೇಕು ಎನ್ನುವುದು ಪ್ರಕೃತಿಯನ್ನೂ ದುಷ್ಟರನ್ನೂ ನಿರ್ಮಾಣ ಮಾಡಿದ ಭಗವಂತನ ನಿಯಮ. ಇದು ವೀರಪ್ಪನ್ ಕತೆಯಲ್ಲ: ಆದರೆ ಅದನ್ನೇ ಹೋಲುವ ಕಾಡಿನ ಬದುಕನ್ನು ಹೊರಜಗತ್ತಿಗೆ ತೋರಿಸುವ ಪರೋಕ್ಷ ಪ್ರಯತ್ನ ಅಷ್ಟೇ. ಜ್ಞಾನದ ಕೊರತೆ ಇರುವ ಮನುಷ್ಯ ಹೇಗೆ ಮೃಗದಂತೆ ವರ್ತಿಸುತ್ತಾನೆ:ಅನಿವಾರ್ಯತೆ ಎಂತಹ ವಾತಾವರಣ ಸೃಷ್ಟಿಸುತ್ತದೆ; ಹುಟ್ಟುಗುಣದಂತೆ ಪರಿಸರ ಕೂಡ ಯಾವ ರೀತಿ ನಮ್ಮ ಮೇಲೆ ಪ್ರಭಾವ ಬೀರುತ್ತದೆ ಎನ್ನುವ ಸೂಕ್ಷ್ಮವೂ ಇದರಲ್ಲಿ ಸಿಗಬಹುದು. ಇನ್ನೊಬ್ಬರ ಕಷ್ಟ ಅರ್ಥ ಮಾಡಿಕೊಳ್ಳದವರ ಬದುಕಿನ ಕತೆ-ವ್ಯಥೆಯೂ ಇದರಲ್ಲಿದೆ. ಒಬ್ಬ ವ್ಯಕ್ತಿ ದುಷ್ಟನಾಗಲು ಸಮಾಜದ ಕೊಡುಗೆಯೂ ಕಾರಣವಾಗುತ್ತದೆ ಎನ್ನುವುದನ್ನು ಕೂಡ ಮರೆಯುವಂತಿಲ್ಲ ಎಂದಿದ್ದಾರೆ.

ಅಲ್ಲದೆ ಕತೆಯ ಜೊತೆಗೇ ಪಶ್ಚಿಮ ಘಟ್ಟದ ಚಳಿ, ಮಳೆ, ಬಿಸಿಲು, ಮಂಜು, ಕಷ್ಟ-ನಷ್ಟ, ಗುಡ್ಡ-ಬೆಟ್ಟ, ಪ್ರಾಣಿ-ಪಕ್ಷಿ, ಪರಿಸರಗಳ ಬಗ್ಗೆಯೂ ಒಂದಷ್ಟು ರೋಚಕ ಚಿತ್ರಣ ನೀಡುವ ಉದ್ದೇಶವೂ ಇದರಲ್ಲಿದೆ. ಮಲೆನಾಡಿನಲ್ಲೆ ಹುಟ್ಟಿ ಕಾಡಿನಲ್ಲಿ ಕಳೆದ ಅನುಭವಗಳು ಬೆನ್ನಿಗಿವೆ. ‘ಮಲೆನಾಡಿನ ರೋಚಕ ಕತೆ’ಗಳ ಸರಣಿಯಲ್ಲಿ ಎಲ್ಲವನ್ನೂ ಒಂದೊಂದಾಗಿ ಓದುಗರ ಮುಂದಿಡಲು ಯತ್ನಿಸುತ್ತಿದ್ದೇನೆ. ಇದು ಅದರ ಹದಿಮೂರನೆಯ ಕಂತು ಎಂಬುದಾಗಿ ಬರೆದುಕೊಂಡಿದ್ದಾರೆ.

About the Author

ಗಿರಿಮನೆ ಶ್ಯಾಮರಾವ್

ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...

READ MORE

Related Books