ನಾ. ಡಿಸೋಜ ಅವರು ಬರೆದ ಕಾದಂಬರಿ-ಮುಳುಗಡೆ. ಈ ಕೃತಿಯು ನಾ. ಡಿಸೋಜ ಅವರ ಸಮಗ್ರ ಸಾಹಿತ್ಯದ ರೂಪದಂತಿದೆ ಎಂಬುದು ಸಾಹಿತ್ಯ ವಲಯದಲ್ಲಿಯ ಪ್ರಶಂಸೆಗಳು. ಮುಳುಗಡೆ ಪ್ರದೇಶದ ಜನರ ದಾರುಣ ಬದುಕು ಹಾಗೂ ಪುನಃ ಕಟ್ಟಿಕೊಳ್ಳಲು ಅವರು ಪಡೆವ ಕಷ್ಟಗಳು ಎಲ್ಲವನ್ನೂ ಹೃದಯಂಗಮವಾಗಿ ಬರೆದಿರುವುದು ಈ ಕಾದಂಬರಿಯ ವೈಶಿಷ್ಟ್ಯ.
ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಅವರು 2025 ಜ. 05 ಭಾನುವಾರದಂದು ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ...
READ MORE