ಮುಪ್ಪಿನ ಷಡಕ್ಷರಿ

Author : ಕುರುವ ಬಸವರಾಜ್

Pages 69

₹ 15.00




Year of Publication: 1998
Published by: ಕರ್ನಾಟಕ ಸಾಹಿತ್ಯ ಅಕಾಡೆಮಿ
Address: ನೃಪತುಂಗ ರಸ್ತೆ, ಬೆಂಗಳೂರು- 560001

Synopsys

‘ಮುಪ್ಪಿನ ಷಡಕ್ಷರಿ’ ತತ್ವಪದಕಾರ ಮುಪ್ಪಿನ ಷಡಕ್ಷರಿ ಅವರ ತತ್ವಪದಗಳನ್ನು ಲೇಖಕ ಕುರುವ ಬಸವರಾಜು ಸಂಪಾದಿಸಿದ್ದಾರೆ. ಕ್ರಿ.ಶ. 1500ರ ಸುಮಾರಿಗೆ ಜೀವಿಸಿದ್ದ ಮುಪ್ಪಿನ ಷಡಕ್ಷರಿ ಅವರು ಕಾವೇರಿ ತೀರದ ಶಂಭುಲಿಂಗ ಬೆಟ್ಟದಲ್ಲಿ ತಪಸ್ಸು ಮಾಡಿದ್ದಾಗಿ ಹೇಳಲಾಗುತ್ತದೆ. ಇವರು ಅನೇಕ ತತ್ವಪದಗಳನ್ನು ರಚಿಸಿದ್ದು. "ಸುಬೋಧಸಾರ" ಕೃತಿಯಲ್ಲಿ ಅನೇಕ ಹಾಡುಗಳಿವೆ. ಕನ್ನಡ ಸಾಹಿತ್ಯಲೋಕದಲ್ಲಿ ಮುಪ್ಪಿನ ಷಡಕ್ಷರಿಯ 'ತಿರುಕನ ಕನಸು" ಗೀತೆಯನ್ನು ಕೇಳದವರಾರು? ಮೇಲ್ನೋಟಕ್ಕೆ ಮಕ್ಕಳ ಗೀತೆಗಳ ಲಯ ಹೊಂದಿರುವ ಈ ಹಾಡು ಗರ್ಭದಲ್ಲಿ ಅಗೆದಷ್ಟೂ ಅರ್ಥವಂತಿಕೆ ಉಂಟು ಮಾಡುತ್ತದೆ. ಅಂತಹ ತತ್ಪಪದಕಾರನ ಬಹುಮುಖ್ಯ ಗೀತೆಗಳು ಈ ಕೃತಿಯಲ್ಲಿ ಸಂಕಲನಗೊಂಡಿವೆ.

About the Author

ಕುರುವ ಬಸವರಾಜ್

ಲೇಖಕ, ಜಾನಪದ ತಜ್ಞ ಕುರುವ ಬಸವರಾಜ್ ಅವರು ಮೂಲತಃ ಹಳೆಯ ಶಿವಮೊಗ್ಗ, ಈಗಿನ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕುರುವ ಗ್ರಾಮದವರು. ಜಾನಪದ ಲೋಕದಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಕರ್ನಾಟಕ ವಿ.ವಿ.ಯಿಂದ ಎಂ.ಎ(ಕನ್ನಡ) ಪದವಿ ಮತ್ತು ಬೆಂಗಳೂರು ವಿ.ವಿ.ಯಲ್ಲಿ ‘ಜನಪದ ಮಹಾಕಾವ್ಯಗಳ ನಿರ್ಮಾಣ ಪ್ರತಿಭೆಯ ನೆಲೆಗಳು’ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ಜಾನಪದ ಅಕಾಡೆಮಿ ಫೆಲೋಷಿಪ್ ಗಾಗಿ ಕರ್ನಾಟಕ ಜನಪದ ಸಂಗೀತ ಅಧ್ಯಯನ ಮಾಡಿದ್ದಾರೆ. ಪ್ರಕಟಿತ ಕೃತಿಗಳು: ಹುಲ್ಲೆಹಾಡು, ಕಾಡೊಡಲ ಹಾಡು, ಬೇಲಿ ಮ್ಯಾಗಳ ಹೂವು, ಮಣ್ಣ ಕುಸುಮದ ಹಕ್ಕಿ (ಕಾವ್ಯಸಂಗ್ರಹಗಳು) ಸೆಳೆತ, ...

READ MORE

Related Books