ಮೂವತ್ತು ಮಳೆಗಾಲ

Author : ಎಚ್. ಎಸ್. ವೆಂಕಟೇಶಮೂರ್ತಿ

Pages 302

₹ 250.00




Year of Publication: 2001
Published by: ಸಂವಾದ
Address: ಮಲ್ಲಾಡಿಹಳ್ಳಿ

Synopsys

ಕವಿ ಎಚ್.ಎಸ್.ವೆಂಕಟೇಶಮೂರ್ತಿ ಅವರ ಸಮಗ್ರ ಕಾವ್ಯ ಸಂಪುಟದ ಮೊದಲ ಸಂಪುಟ ಇದು. ಈ ಮೊದಲ ಸಂಪುಟದಲ್ಲಿ ಪರಿವೃತ್ತ, ಬಾಗಿಲು ಬಡಿವ ಜನ, ಮೊಖ್ತಾ, ಸಿಂದಾಬಾದನ ಆತ್ಮಕಥೆ, ಕ್ರಿಯಾಪರ್ವ, ಒಣಮರದ ಗಿಳಿಗಳು, ಗೀತೆಗಳು ಸಂಕಲನಗಳಲ್ಲಿನ ಅವರ ಕವಿತೆಗಳು ಸೇರಿವೆ. ಈ ಸಂಪುಟದ ಬೆನ್ನುಡಿಯಲ್ಲಿ ಜಿ.ಎಸ್.ಶಿವರುದ್ರಪ್ಪನವರು ಬರೆದ ಮಾತುಗಳು ಹೀಗಿವೆ: “ಈವರೆಗಿನ ಹಲವು ಸಾಹಿತ್ಯ ಚಳವಳಿಗಳಿಂದ ಕಲಿತ ಪಾಠಗಳೂ,ಕವಿತೆಯ ನಿರ್ಮಿತಿ ಗಂಭೀರವಾದೊಂದು ಕಲೆಗಾರಿಕೆ ಎಂಬ ಎಚ್ಚರವೂ, ಎಲ್ಲಿಯೂ ಸ್ಥಗಿತಗೊಳ್ಳದೆ ಹೊಸ ಜಿಗಿತಗಳ ಮೂಲಕ ಮುನ್ನಡೆಯುವ ಉತ್ಸಾಹವೂ, ಬದುಕಿನ ವಾಸ್ತವಗಳನ್ನೂ ವಿಸ್ಮಯಗಳನ್ನೂ ನಿಗೂಢಗಳನ್ನೂ ಗ್ರಹಿಸಿ ನಿರೂಪಿಸುವ ಮತ್ತು ವ್ಯಾಖ್ಯಾನಿಸುವ ಕೌಶಲವೂ, ದೊಡ್ಡದೊಂದನ್ನು ಹಿಡಿದು ಕಡೆದು ನಿಲ್ಲಿಸಬೇಕೆಂಬ ಮಹತ್ವಾಖಾಂಕ್ಷೆಯೂ, ಎಲ್ಲದಕ್ಕಿಂತ ಮಿಗಿಲಾಗಿ ಕವಿತೆಯ ಬಗ್ಗೆ ಅವರಿಗಿರುವ ಅದಮ್ಯವಾದ ಪ್ರೀತಿಯೂ ವೆಂಕಟೇಶಮೂರ್ತಿ ಅವರ ಬರಹದ ಹಿಂದಿನ ಮೂಲ ಪ್ರೇರಣೆಗಳಾಗಿವೆ.”

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Related Books