ಮೈಸೂರು ಮಲ್ಲಿಗೆ

Author : ಕೆ.ಎಸ್. ನರಸಿಂಹಸ್ವಾಮಿ

Pages 96

₹ 50.00

Buy Now


Year of Publication: 2014
Published by: ಸ್ಟಾಂಡರ್ಡ್ ಬುಕ್ ಕಂಪನಿ
Address: ಬೆಂಗಳೂರು

Synopsys

ಐರಾವತ, ದೀಪದ ಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ತೆರೆದ ಬಾಗಿಲು, ನವಪಲ್ಲವ, ದುಂಡು ಮಲ್ಲಿಗೆ, ಸಂಜೆ ಹಾಡು, ಕೈಮರದ ನೆಳಲಲ್ಲಿ, ಎದೆ ತುಂಬ ನಕ್ಷತ್ರ, ಮೌನದಲಿ ಮಾತ ಹುಡುಕುತ್ತ, ದೀಪ ಸಾಲಿನ ನಡುವೆ-ಇವು ಕೆ.ಎಸ್. ನರಸಿಂಹಸ್ವಾಮಿ ಅವರ ಕವನಗಳ ಸಂಕಲನಗಳ ಪೈಕಿ ‘ಮೈಸೂರು ಮಲ್ಲಿಗೆ’ಯೂ ಒಂದು ಕವನ ಸಂಕಲನ. ಈ ಕೃತಿಯು ಅವರಿಗೆ ಭಾರೀ ಪ್ರಸಿದ್ಧಿ ತಂದುಕೊಟ್ಟಿತು. ಇಲ್ಲಿಯ ಕವನಗಳು ಹಾಡುಗಳಾಗಿ ಜನಮಾನಸದಲ್ಲಿ ನಲಿದಾಡಿದವು. ಮೈಸೂರು ಮಲ್ಲಿಗೆ ಶೀರ್ಷಿಕೆಯ ಈ ಕವನ ಸಂಕಲನದಲ್ಲಿಯ ಹಾಡುಗಳನ್ನು ಆಧರಿಸಿ ಕನ್ನಡ ಚಲನಚಿತ್ರವೂ ಬಿಡುಗಡೆಯಾಯಿತು.

About the Author

ಕೆ.ಎಸ್. ನರಸಿಂಹಸ್ವಾಮಿ
(26 January 1915 - 28 December 2003)

ಮೈಸೂರ ಮಲ್ಲಿಗೆಯ ಕವಿಯೆಂದು ಪ್ರಖ್ಯಾತರಾಗಿ ಮನೆಮಾತಾದ ಕೆ.ಎಸ್. ನರಸಿಂಹಸ್ವಾಮಿ ಅವರು (ಕಿಕ್ಕೇರಿ ಸುಬ್ಬರಾಯ ನರಸಿಂಹಸ್ವಾಮಿ) ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 1915ರ ಜನೆವರಿ 26ರಂದು ಜನಿಸಿದರು. ತಂದೆ ಸುಬ್ಬರಾಯ, ತಾಯಿ ನಾಗಮ್ಮ. ಮೈಸೂರಿನ ಮಹಾರಾಜ ಹೈಸ್ಕೂಲು, ಇಂಟರ್ ಮೀಡಿಯೇಟ್ ಕಾಲೇಜ್ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜುಗಳಲ್ಲಿ ಓದಿದ ಅವರು ಆರ್ಥಿಕ ತೊಂದರೆಗಳಿಂದ ಡಿಗ್ರಿ ವ್ಯಾಸಂಗವನ್ನು ಪೂರ್ಣ ಮಾಡಲಾಗಲಿಲ್ಲ. 22ನೇ ವಯಸ್ಸಿನಲ್ಲಿ ಗುಮಾಸ್ತೆ ಹುದ್ದೆಗೆ ಸೇರಿದ್ದರು. ಆ ವೇಳೆಗೆ ತಿಪಟೂರಿನ ವೆಂಕಮ್ಮನವರೊಂದಿಗೆ ವಿವಾಹವಾಗಿತ್ತು. ತಮ್ಮ ವೃತ್ತಿಜೀವನದ ಕಾಲದಲ್ಲಿ ಮೈಸೂರು, ನಂಜನಗೂಡು, ಬೆಂಗಳೂರುಗಳಲ್ಲಿ ಬೇರೆ ಬೇರೆ ಇಲಾಖೆಗಳಲ್ಲಿ ಸರಕಾರಿ ನೌಕರರಾಗಿ ದುಡಿದು ...

READ MORE

Related Books