ನಾನು ಹಿಂದೂ ಆಗಿ ಸಾಯಲಾರೆ

Author : ಸದಾಶಿವ ಮರ್ಜಿ

Pages 78

₹ 60.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

’ನಾನು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ. ಆದರೆ ಹಿಂದೂ ಆಗಿ ಸಾಯಲಾರೆ’ ಎಂಬುದು ಸಂವಿಧಾನ ಶಿಲ್ಪಿ ಡಾ. ಬಿ. ಆರ್‌ .ಅಂಬೇಡ್ಕರ್‌ ಅವರ ಘೋಷಣೆಯಾಗಿತ್ತು. ಮುಂದೆ ಇದು ವಿಮೋಚನೆಗಾಗಿ ಹೋರಾಡುವ ದಲಿತರು- ಶೋಷಿತರ ಶಕ್ತಿ ಮಂತ್ರವೂ ಆಯಿತು. 

ಈ ಘೋಷಣೆಯನ್ನು ಪ್ರಧಾನವಾಗಿಟ್ಟುಕೊಂಡು ಸದಾಶಿವ ಮರ್ಜಿ ಅವರು, ದಲಿತರು ಮತ್ತು ಶೋಷಿತರ ವರ್ತಮಾನದ ಸವಾಲುಗಳನ್ನು ಚರ್ಚಿಸಿದ್ದಾರೆ. ಘರ್‌ ವಾಪಸಿಯಂತಹ ಕರೆಯ ಹಿಂದಿರುವ ರಾಜಕಾರಣವನ್ನು ವಿಶ್ಲೇಷಿಸಿದ್ದಾರೆ. ಅಲ್ಲದೆ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಐತಿಹಾಸಿಕ ಹಿನ್ನೆಲೆ ಮತ್ತು ಅವಶ್ಯಕತೆಯನ್ನು ವಿವರಿಸಲಾಗಿದೆ. ಹಿಂದೂ ಧರ್ಮ ಪರಿತ್ಯಜಿಸುವ ಅಂಬೇಡ್ಕರ್‌ ಅವರ ಚಾರಿತ್ರಿಕ ನಿರ್ಣಯದ ಹಿನ್ನೆಲೆ, ಮುನ್ನೆಲೆಗಳ ಬಗ್ಗೆ ಕೃತಿ ಮಾತನಾಡುತ್ತದೆ. ಬುದ್ಧನೆಡೆಗೆ ಅಂತಿಮ ಪಯಣವೇ ದಲಿತರ ಪಾಲಿಗಿರುವ ವಿಮೋಚನೆಯ ಹಾದಿ ಎಂದು ಕೃತಿ ಆತ್ಯಂತಿಕವಾಗಿ ಸ್ಪಷ್ಟಪಡಿಸುತ್ತದೆ. 

About the Author

ಸದಾಶಿವ ಮರ್ಜಿ

ಬಾಗಲಕೋಟ ಜಿಲ್ಲೆಯ ಹುನಗುಂದದಲ್ಲಿ ಜನಿಸಿದ ಸದಾಶಿವ ಮರ್ಜಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆರಂಭದಲ್ಲಿ ನವನಾಡು ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕೆಲ ಕಾಲ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಕವಿವಿಯಲ್ಲಿ ರೀಡರ್ ಆಗಿ ಕೆಲಸ ಮಾಡಿರುವ ಅವರು 1997ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ 'ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಂಷ ನಿರ್ದೇಶಕರಾಗಿ ನೇಮಕವಾದರು. ಈಗ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ, 'ಮಹಾತ್ಮ ಜ್ಯೋತಿ ಬಾಫುಲೆ- ಸಾಮಾಜಿಕ ಚಳುವಳಿಯ ಪಿತಾಮಹ', 'ದಲಿತರ ಮೇಲಿನ ದೌರ್ಜಗಳು ಅವರ ಪ್ರಕಟಿತ ಕೃತಿಗಳಾಗಿವೆ. ಅವರ ಸಂಶೋಧನಾ ...

READ MORE

Related Books