ನಾಯಿ ನೆರಳು

Author : ಎಸ್.ಎಲ್. ಭೈರಪ್ಪ

Pages 168

₹ 180.00

Buy Now


Year of Publication: 2013
Published by: ಸಾಹಿತ್ಯ ಭಂಡಾರ

Synopsys

ಜನಪ್ರಿಯ ಲೇಖಕ ಎಸ್.ಎಲ್. ಭೈರಪ್ಪನವರ ’ನಾಯಿ ನೆರಳು’ ಒಂದು ಅಸಾಮಾನ್ಯ ಮನೋರಂಜಕ ಕತೆಯನ್ನು ಹೊಂದಿರುವ ಕಾದಂಬರಿ. ೨೪೦ ಪುಟಗಳಿರುವ ಈ ಕಾದಂಬರಿಯನ್ನು ಲೇಖಕರು ಕೇವಲ ಮೂರು ವಾರಗಳಲ್ಲಿ ಬರೆದು ಮುಗಿಸಿರುವುದಾಗಿ ತಿಳಿಸಿದ್ದಾರೆ. ತಿರುಮಲ ಜೋಯಿಸರಿಗೆ ಅವರ ಹೆಂಡತಿ ಗರ್ಭಿಣಿಯಾಗುವ ಕಾಲ ದಾಟಿದ ಮೇಲೆ ಮಗ ಹುಟ್ಟುತ್ತಾನೆ. ಅವನು ಹುಟ್ಟಿದ ತಕ್ಷಣ ಚೀರಿ ಮೂರ್ಚೆ ಹೋಗುವ ಅವನ ತಾಯಿ ಮುಂದೆ ಎಂದೂ ಎಚ್ಚರ ಆಗುವುದೇ ಇಲ್ಲ. ಬೆಳೆದು ದೊಡ್ಡವನಾಗುತ್ತಿದ್ದಂತೆ ಈ ಹುಡುಗ ತನಗೆ ಮದುವೆಯಾಗಿದೆ ಎಂದು ಹೇಳ ತೊಡಗುತ್ತಾನೆ. ಬೇರೆ ಮಕ್ಕಳೊಡನೆ ಬೆರೆಯದೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ನಾಯಿಯ ಜೊತೆಗೆ ಅವಿರತವಾಗಿ ಜೊತೆಗಿರತೊಡಗುತ್ತಾನೆ. ಆ ನಾಯಿಯ ನೆರಳು ಎಂಬಂತೆ ಬೆಳೆಯ ತೊಡಗುತ್ತಾನೆ.

ಪುನರ್ಜನ್ಮದ ಕತೆಯನ್ನು ಭೈರಪ್ಪನವರು ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಹಿಂದಿನ ಜನ್ಮದ ತಂದೆ ಬಂದು ಜೋಯಿಸರ ಬಳಿ ಕೇಳುವುದು ಮತ್ತು ಅವನನ್ನು ಕರೆದೊಯ್ಯುತ್ತಾರೆ. ಅಲ್ಲಿ ಹದಿನೆಂಟು ವರ್ಷ ವಿಧವಾ ಜೀವನ ನಡೆಸಿದ ಹೆಂಡತಿ (?)ಯೊಡನೆ ಸಂಸಾರ ನಡೆಸುತ್ತಾನೆ. ಮಗುವೂ ಆಗುತ್ತದೆ. ಹೀಗೆ ಎರಡು ಪಾತಳಿಯಲ್ಲಿ ತೆರೆದುಕೊಳ್ಳುತ್ತ ಹೋಗುವ ಕಾದಂಬರಿ ಭೈರಪ್ಪನವರ ನಿರೂಪಣಾ ಸಾಮರ್ಥ್ಯಕ್ಕೆ ಕನ್ನಡಿಯಂತಿದೆ. ಕಾದಂಬರಿಯ ಓದು ವಿಭಿನ್ನ ಅನುಭವವನ್ನು ತೆರೆದಿಡುತ್ತದೆ. ಸರಾಗವಾಗಿ ಓದಿಸಿಕೊಂಡು ಹೋಗುವ ಕಾದಂಬರಿಯು ಅದೇ ಕಾರಣಕ್ಕಾಗಿ ಪ್ರಿಯವಾಗುತ್ತದೆ.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books