ನಾಡೋಜ ಡಾ. ಮನು ಬಳಿಗಾರ್ ಅವರ ಸಾಹಿತ್ಯ ಅವಲೋಕನ

Author : ಡಿ.ಕೆ. ಚಿತ್ತಯ್ಯ ಪೂಜಾರ್

Pages 395

₹ 295.00




Year of Publication: 2020
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

‘ನಾಡೋಜ ಡಾ. ಮನು ಬಳಿಗಾರ್ ಅವರ ಸಾಹಿತ್ಯ ಅವಲೋಕನ’ ಲೇಖಕ ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರು ಸಂಪಾದಿಸಿರುವ ಕೃತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉನ್ನತ ಅಧಿಕಾರಿಯೂ ಆಗಿದ್ದ ಮನು ಬಳಿಗಾರ್ ಅವರ ಸಾಹಿತ್ಯಿಕ ಬದುಕಿನ ಮೇಲೆ ಬೆಳಕು ಚೆಲ್ಲುವ ಕೃತಿ ಇದು. ಮನು ಬಳಿಗಾರ್ ಅವರ ಕುರಿತಾಗಿ ಸಾಹಿತಿ ದಿಗ್ಗಜರು ಬರೆದಿರುವ ವಿಶೇಷ ಅನಿಸಿಕೆಗಳನ್ನು ಈ ಕೃತಿಯಲ್ಲಿ ದಾಖಲಿಸಲಾಗಿದೆ.

About the Author

ಡಿ.ಕೆ. ಚಿತ್ತಯ್ಯ ಪೂಜಾರ್

ಲೇಖಕ ಡಾ. ಡಿ.ಕೆ. ಚಿತ್ತಯ್ಯ ಪೂಜಾರ್ ಅವರು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ದವಡ ಬೆಟ್ಟಗ್ರಾಮದವರು. ದವಡಬೆಟ್ಟ, ಮಧುಗಿರಿ, ಚನ್ನಪಟ್ಟಣ, ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದು, 1996-97 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವೀಧರರು. 2001ರಲ್ಲಿ ಡಾ.ಜಿ.ಆರ್. ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ  ‘ನಿಡುಗಲ್ಲು:ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾಪ್ರಬಂಧವನ್ನು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ, ಡಾಕ್ಟರೇಟ್ ಪದವೀಧರರು. ಚಿತ್ತಯ್ಯ ಅವರು ಶಾಸ್ತ್ರೀಯ ಭಾಷೆಯಲ್ಲಿಅಧ್ಯಯನ ನಡೆಸಿದ್ದು, ಸೃಜನಶೀಲ ಮತ್ತು ಸಂಶೋಧನಾ ಬರಹಗಳಾಗಿ 29 ಕೃತಿಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನ ಅಕ್ಷರ ಮಂದಿರದ ಅಪೇಕ್ಷೆಯಂತೆ ಮಕ್ಕಳಿಗೆ ಮೀಸಲಾದ 50 ಪುಸ್ತಕಗಳನ್ನು ಸಂಪಾದಿಸಿ ಕೊಟ್ಟಿದ್ದಾರೆ. ಇವರಿಗೆ 2017ನೇ ಸಾಲಿನ ರಾಜ್ಯಮಟ್ಟದ ‘ಶ್ರೀವಿಜಯಾ ಸಾಹಿತ್ಯ ...

READ MORE

Related Books