ನಗರದಲ್ಲಿ ನೆರಳು

Author : ಚೆನ್ನವೀರ ಕಣವಿ

Pages 64

₹ 30.00




Year of Publication: 1974
Published by: ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ
Address: ಸಂ. 9, ’ರಮ್ಯ’, ಗೋಕುಲಂ, 3ನೆಯ ಹಂತ, ಮೈಸೂರು
Phone: 2513821/9880749412

Synopsys

ಸಾಮಾಜಿಕ ಬದುಕಿನ ಚಿಂತನೆಯನ್ನು ಒಳಗೊಂಡ ಕಣವಿಯವರ ಕವಿತೆಗಳ ಸಂಕಲನ 'ನಗರದಲ್ಲಿ ನೆರಳು'. 1974ರಲ್ಲಿ ಮೊದಲ ಬಾರಿಗೆ ಪ್ರಕಟವಾದ ಈ ಸಂಕಲನದಲ್ಲಿ 31ಕವಿತೆಗಳಿವೆ. ಪರಿಸರ ಪ್ರಜ್ಞೆಯಿಲ್ಲದೆ ಬೆಳೆಯುತ್ತಿರುವ ನಗರಗಳ ದಾರುಣ ಸ್ಥಿತಿಯನ್ನು ಕವಿ ವಿಡಂಬಿಸಿದ್ದಾರೆ. ಜನಸಂಖ್ಯೆ ಹೆಚ್ಚುತ್ತಿರುವುದರ ಚಿಂತನೆಯಿದೆ.

ಸಮಕಾಲೀನ ಬದುಕಿಗೆ ಸ್ಪಂದಿಸುವ ಅನೇಕ ಕವಿತೆಗಳನ್ನು ರಚಿಸಿರುವ ಕಣವಿಯವರು ಭಾರತದಲ್ಲಿ ಈಗ ಯಾರು ಯಾರಿಗೆ ಹೇಳಬೇಕು ? ಹಾಗೆಯೇ 'ಯಾರು ಕೇಳುತ್ತಾರೆ ಹೇಳಿರಣ್ಣ' ವೈಯಕ್ತಿಕ ಪ್ರತಿಷ್ಠೆ, ಆಡಂಬರದ ಸ್ವಾರ್ಥಗಳಿಂದ ಕೂಡಿದ ದೇಶದ ವ್ಯವಸ್ಥೆ ಹದ ತಪ್ಪಿರುವುದನ್ನು  ಸಮರ್ಥವಾಗಿ ಸೆರೆಹಿಡಿದಿದ್ದಾರೆ.

 

ಮೇಜು ಗುದ್ದುತ್ತಾರೆ, ಮೈಕು ಮುರಿಯುತ್ತಾರೆ

ಮಾಲೆ ಬೇಡುತ್ತಾರೆ, ಮೋಜು ಮಾಡುತ್ತಾರೆ ,

ಯಾರು ಕೇಳುತ್ತಾರೆ ಹೇಳಿರಣ್ಣ.

 

ಫಂಡು ಎತ್ತುತ್ತಾರೆ, ಎತ್ತಿ ಹಾಕುತ್ತಾರೆ

ಬಂಡು ಹೂಡುತ್ತಾರೆ, ಬೆಂಡು ಸುಲಿಯುತ್ತಾರೆ

ಯಾರು ಕೇಳುತ್ತಾರೆ ಹೇಳಿರಣ್ಣ.

 

ಕೈಯ ಮುಗಿಯುತ್ತಾರೆ, ಕಾಲು ಕೆದರುತ್ತಾರೆ

ಬಾಲ ಹಿಡಿಯುತ್ತಾರೆ, ಮೇಲೆ ಏರುತ್ತಾರೆ

ಯಾರು ಕೇಳುತ್ತಾರೆ ಹೇಳಿರಣ್ಣ.

(ಯಾರು ಕೇಳುತ್ತಾರೆ ಹೇಳಿರಣ್ಣ)

About the Author

ಚೆನ್ನವೀರ ಕಣವಿ
(28 June 1928)

‘ಸಮನ್ವಯ ಕವಿ’ ಎಂದು ಗುರುತಿಸಲಾಗುವ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯವಾಗಿ ಪಾಲುಗೊಂಡವರು. ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ. ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ೧೯೫0ರಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು. ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿ (1952) ಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು. ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ...

READ MORE

Related Books