ನಳಚಂಪು

Author : ವಿವಿಧ ಲೇಖಕರು

Pages 146

₹ 145.00




Year of Publication: 1971
Published by: ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮೈಸೂರು
Address: ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ- 570001\n
Phone: 0821-2419872

Synopsys

‘ನಳಚಂಪು’ ಎಚ್.ಆರ್. ರಂಗಸ್ವಾಮಿ ಅಯ್ಯಂಗಾರ್ ಹಾಗೂ ವಿದ್ವಾನ್ ಎಸ್.ಎನ್. ಕೃಷ್ಣಜೋಯಿಸ್ ಅವರ ಸಂಪಾದಕ್ವದ ಗ್ರಂಥವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಸಂಸ್ಕೃತಿ, ಇತಿಹಾಸ, ಭಾಷಾಚರಿತ್ರೆ-ಇವುಗಳ ಸಮಗ್ರ ಅರಿವಿಗೆ ಶಾಸ್ತ್ರೀಯ ವಾಗಿ ಸಂಪಾದಿಸಿದ ಸಾಹಿತ್ಯ ಅತ್ಯಾವಶ್ಯಕ. ಅಷ್ಟೇ ಅಲ್ಲ. ಕೋಶ ಅಥವಾ ನಿಘಂಟುಗಳ ರಚನೆಗೆ, ಅವುಗಳ ಮೂಲಘಟಕಗಳಾದ ಶಬ್ದಗಳ ಅರ್ಥ ನಿರ್ಧಾರಕ್ಕೆ ಶಾಸ್ತ್ರೀಯವಾಗಿ ಸಂಪಾದಿಸಿದ ಸಾಹಿತ್ಯ ಕೃತಿಗಳು ಅನಿವಾರ್ಯವಾಗುತ್ತವೆ. ಸಾಂಸ್ಕೃತಿಕ ಮತ್ತು ಐತಿಹಾಸಿಕ ಪುನರಚನೆಗೆ ಅಗತ್ಯವಾಗಿ ಬೇಕಾಗಿರುವ ಅನೇಕ ಗ್ರಂಥಗಳು ಇಂದಿಗೂ ಅನುಪಲಬ್ದವಾಗಿವೆ.

ಶಾಸನಗಳಲ್ಲಿ, ಅನ್ಯ ಕವಿಗಳ ಕೃತಿಗಳಲ್ಲಿ ಉಕ್ತವಾಗಿರುವುದರಿಂದ ಮಾತ್ರ ಹಲವು ಕವಿಗಳ ಮತ್ತು ಗ್ರಂಥಗಳ ಹೆಸರುಗಳು ತಿಳಿದು ಬರುತ್ತವೆ. ಕಾವ್ಯ ಪ್ರಯೋಗ ಪರಿಣತಮತಿಗಳಾಗಿದ್ದ ಕನ್ನಡ ಜನತೆಯ ಬಳಿ ಒಂದು ಕಾಲದಲ್ಲಿ ಇವೆಲ್ಲ ಲಭ್ಯವಾಗಿದ್ದಿರಬೇಕು. ನಾಡಿನ ಹಲವೆಡೆಗಳಲ್ಲಿ ಓಲೆಗರಿಯ ಸಾಹಿತ್ಯ ಅನೇಕ ಶತಮಾನ ಗಳವರೆಗೆ ತನ್ನ ವೈಭವವನ್ನು ಮೆರೆದಿತ್ತು. ಕಾವ್ಯಪಾರಾಯಣ ಸಾಂಸ್ಕೃತಿಕ ಜೀವನದ ಅಂಗವಾಗಿ ಪರಿಣಮಿಸಿತ್ತು. ಕಾಲಕ್ರಮದಲ್ಲಿ ದೇಶಕಾಲಪರಿಸರಗಳ ಪ್ರಭಾವದಿಂದ ಜನತೆಯ ಆಜ್ಞಾನ, ಆಶ್ರದ್ಧೆ ಮತ್ತು ಔದಾಸೀನ್ಯಗಳ ಫಲವಾಗಿ ಅವು ಮೂಲೆಗುಂಪಾ ಗುತ್ತ ಬಂದು ಕೀಟಗಳಿಗೆ ಆಹಾರವಾಗತೊಡಗಿದವು. ಅವುಗಳನ್ನು ಸಂರಕ್ಷಿಸಲಾಗದೆ ನದಿಯ ಪಾಲೋ, ಬೆಂಕಿಯ ಪಾಲೋ ಮಾಡುತ್ತಿದ್ದ ಉದಾಹರಣೆಗಳೂ ಅಸಂಖ್ಯ ವಾಗಿವೆ. ಮತ್ತೆ ಕೆಲವೆಡೆಗಳಲ್ಲಿ ನಮಾತ್ರಿಯಂದು ಬೆಳಕುಕಂಡು ಪೂಜಾರ್ಹವಾಗಿ, ಹಾಲುಂಡು ಮತ್ತೆ ಕತ್ತಲ ಕೋಣೆಯ ಮೂಲೆ ಸೇರಬೇಕಾದ ದುಸ್ಥಿತಿ ಒದಗಿ ಹಲವಾರು ಅಮೂಲ್ಯ ಪ್ರತಿಗಳು ತ್ರುಟಿತವಾಗಿ ಹೋಗಿವೆ. ಇಂಥ ಮೌಡ್ಯವನ್ನು ದೂರಮಾಡಿ ಹಸ್ತಪ್ರತಿಗಳನ್ನು ಹೊರಗೆಳೆದು, ಅವುಗಳನ್ನು ಕೊಂಡು ಇಲ್ಲವೆ ಎರವಲಾಗಿ ಪಡೆದು ಪರಿಷ್ಕರಿಸಿ, ಸಂಪಾದಿಸುವ ಹೊಣೆಯನ್ನು ಈ ಸಂಸ್ಥೆಯ ಸಂಪಾದನ ವಿಭಾಗ ಹೊತ್ತಿದೆ.

ಅನುಪಲಬ್ಧವಾಗಿರುವ ಸಾಹಿತ್ಯರಾಶಿಯನ್ನು ಹೊರತರಲು, ಉಪಲಬ್ಧ ಸಾಹಿತ್ಯಕ್ಕೆ ಪರಿಷ್ಕಾರ ನೀಡಲು ಹಸ್ತಪ್ರತಿಗಳ ಸಂಗ್ರಹಕಾರ ಸತತವಾಗಿ ನಡೆಯಬೇಕಾಗಿದೆ. ಸಾಹಿತ್ಯಕ ಚಟುವಟಿಕೆಯ ಕೇಂದ್ರಗಳಾಗಿದ್ದ ಎಡೆಗಳಲ್ಲಿ, ಕವಿಗಳ ಕೀರ್ತಿ ಹರಡಿದ್ದ ಪ್ರದೇಶಗಳಲ್ಲಿ, ಜ್ಞಾನಗಂಗೆಯನ್ನು ಮನೆಮನೆಯ ಬಾಗಿಲಿಗೆ ಕೊಂಡೊಯ್ದ ಶಿವಶರಣರು ಮತ್ತು ದಾಸರುಗಳು ಸಂಚರಿಸುತ್ತಿದ್ದ ಸ್ಥಳಗಳಲ್ಲಿ, ಅವರ ನೆನಪಿಗಾಗಿ ಮಠಗಳು, ಸ್ಮಾರಕಗಳು ನಿರ್ಮಿತವಾಗಿರುವ ಕಡೆಗಳಲ್ಲಿ, ಅನುಯಾಯಿಗಳ ಮತ್ತು ಭಕ್ತರ ಮನೆ ಗಳಲ್ಲಿ, ಸಾಹಿತ್ಯೋಪಾಸಕರ ಬಳಿಯಲ್ಲಿ ಹೇಗೋ ಎಂತೋ ಸಂಗ್ರಹಿತವಾಗಿರುವ ಹಸ್ತ ಪ್ರತಿಗಳನ್ನು ಸಂಗ್ರಹಿಸಿ ರಕ್ಷಿಸಬೇಕಾಗಿದೆ. ಈ ದೃಷ್ಟಿಯಿಂದ ಈ ಸಂಸ್ಥೆಯ ಹಸ್ತ ಪ್ರತಿಯ ಭಂಡಾರವನ್ನು ಬೆಳೆಸಿಕೊಂಡು ಬರುವ ಆದ್ಯಗಮನ ಕೊಡಲಾಗಿದೆ.

About the Author

ವಿವಿಧ ಲೇಖಕರು

. ...

READ MORE

Related Books