ನಮಗೆ ಭಯವಾಗುವುದೇಕೆ?

Author : ಎ.ಓ. ಆವಲ ಮೂರ್ತಿ

Pages 72

₹ 50.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

ನವಕರ್ನಾಟಕ ಪ್ರಕಾಶನದ ಪುಟ್ಟ ಕಿಟ್ಟ ವಿಜ್ಞಾನ ಸಂವಾದ ಸರಣಿ ಮಾಲೆಯಡಿ ಲೇಖಕ ಎ.ಓ. ಅವಲಮೂರ್ತಿ ಅವರು ಮಕ್ಕಳಿಗಾಗಿ ಬರೆದ ಕೃತಿ-ನಮಗೆ ಭಯವಾಗುವುದೇಕೆ?. ಮಕ್ಕಳನ್ನು ಚಿಂತನಾಶೀಲರನ್ನಾಗಿಸುವ ಉದ್ದೇಶದಿಂದ ಆರಂಭಿಸಲಾದ ಈ ಸರಣಿಯಲ್ಲಿಸುತ್ತಮುತ್ತಲು ನಡೆಯುವ ಸಣ್ಣ ಸಣ್ಣ ಸಂಗತಿಗಳೆಡೆಗೆ ಮಕ್ಕಳು ಗಮನ ಹರಿಸಿ, ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತೆ ಕೃತಿಯನ್ನು ರಚಿಸಿದ್ದು ವೈಶಿಷ್ಟ್ಯ. ಇದರಿಂದ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ದೃಢವಾಗುತ್ತದೆ ಮತ್ತು ಮಕ್ಕಳು ವಿಜ್ಞಾನವನ್ನು ಕುತೂಹಲದಿಂದ ಕಲಿಯುತ್ತಾರೆ ಹಾಗೂ ಮನರಂಜನೆಯೂ ಇಲ್ಲಿರುವುದರಿಂದ ಕಲಿಕೆ ಅರ್ಥಪೂರ್ಣವಾಗಿಸುತ್ತದೆ.

About the Author

ಎ.ಓ. ಆವಲ ಮೂರ್ತಿ

ಎ.ಓ. ಆವಲಮೂರ್ತಿ ಅವರು ಭೌತ ವಿಜ್ಞಾನದ ವಿಶ್ರಾಂತ ಅಧ್ಯಾಪಕರು. ಕಳೆದ ಕೆಲವು ವರ್ಷಗಳಿಂದ ಮಕ್ಕಳ ಪರಿಪೂರ್ಣ ಬೆಳವಣಿಗೆಗೆ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಏನು ಮಾಡಬೇಕು ಎಂಬುದನ್ನು ಕುರಿತು ಚಿಂತನೆ, ಅಧ್ಯಯನ, ಪ್ರಯೋಗಗಳು ಮತ್ತು ಬರವಣಿಗೆ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಹಲವು ಜನಪ್ರಿಯ ವಿಜ್ಞಾನ ಪುಸ್ತಕಗಳನ್ನು ಬರೆದಿದ್ದಾರೆ. ಜನಪ್ರಿಯ ವಿಜ್ಞಾನ ಸಾಹಿತ್ಯವನ್ನು ಕುರಿತೇ ಸಂಶೋಧನ ಪ್ರಬಂಧವನ್ನು ಬರೆದು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆಯೂ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವೆಲ್ಲದರ ಮುಂದುವರಿದ ಭಾಗವಾಗಿ, ಇಂದಿನ ಶಿಕ್ಷಣದಲ್ಲಿ ಇರುವ ಚಿಂತನಶೀಲತೆಯನ್ನು ಮೈಗೂಡಿಸುವುದನ್ನೇ ಪ್ರಮುಖ ...

READ MORE

Related Books