ನಮೋ ಮಂಜುನಾಥ

Author : ಲಕ್ಷ್ಮೀ ಮಚ್ಚಿನ

Pages 120

₹ 100.00




Year of Publication: 2017
Published by: ಶ್ರೀ ಮಂಜುನಾಥೇಶ್ವರ ಪುಸ್ತಕ ಪ್ರಕಾಶನ ಮಾಲೆ
Address: ಉಜಿರೆ

Synopsys

ಲೇಖಕ ಲಕ್ಷ್ಮೀ ಮಚ್ಚಿನ ಅವರ ಕೃತಿ ‘ನಮೋ ಮಂಜುನಾಥ’. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುರಿತು, ಉಜಿರೆಯಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಭಾಗವಹಿಸಿದ ಕುರಿತು, ಮೂರೇ ದಿನಗಳಲ್ಲಿ ಲಕ್ಷಾಂತರ ಮಂದಿ ಸೇರುವ, ವಿವಿಐಪಿ ಭದ್ರತೆಯ ಕಾರ್ಯಕ್ರಮವೊಂದರ ಸಿದ್ಧತೆ ನಡೆದ ಕುರಿತು ವಿವರ ನೀಡುವ ಪುಸ್ತಕ ಇದಾಗಿದೆ.

About the Author

ಲಕ್ಷ್ಮೀ ಮಚ್ಚಿನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ ಮಚ್ಚಿನ ಪ್ರಸ್ತುತ ಉಡುಪಿ ನಿವಾಸಿ. ಬೆಳ್ತಂಗಡಿ ತಾಲೂಕಿನಲ್ಲಿ ಪತ್ರಕರ್ತನಾಗಿ ತನ್ನ 20ನೆಯ ವಯಸ್ಸಿಗೆ ತೊಡಗಿಸಿಕೊಂಡು ಹೊಸದಿಗಂತ, ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕದ ಬಳಿಕ ಉದಯವಾಣಿಯಲ್ಲಿ 2008ರಲ್ಲಿ ವರದಿಗಾರನಾಗಿ ಸೇರಿ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿ ಉಪಮುಖ್ಯ ವರದಿಗಾರನಾಗಿ ಕುಂದಾಪುರದಲ್ಲಿ 2018ರಿಂದ  ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಆಸಕ್ತಿ. ಕಳೆದ ಅಷ್ಟೂ ವರ್ಷಗಳಿಂದ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಅಭ್ಯುದಯಕ್ಕಾಗಿ , ಪರಿಸರ ಪೂರಕವಾಗಿ ಮಾಡಿದ ವರದಿಗಳು ನೂರಾರು. ಇದರಲ್ಲಿ ಫಲ ಕಂಡು ಗ್ರಾಮಾಂತರದ ಸಮಸ್ಯೆ, ಬವಣೆ ನೀಗಲ್ಪಟ್ಟಿದ್ದು ಉಲ್ಲೇಖನೀಯ. ಮಾನವಾಸಕ್ತ ...

READ MORE

Related Books