ನನ್ನ ಕನಸಿನ ಭಾರತ

Author : ಜಿ.ಎಂ. ಕೃಷ್ಣಮೂರ್ತಿ

₹ 295.00




Year of Publication: 2015
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಮಹಾತ್ಮ ಗಾಂಧೀಜಿ ಅವರ ‘ಇಂಡಿಯಾ ಆಫ್ ಮೈ ಡ್ರೀಮ್ಸ್ ’ ಎಂಬ ಆಂಗ್ಲ ಕೃತಿಯನ್ನು ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ-ನನ್ನ ಕನಸಿನ ಭಾರತ. ಭಾರತವು ಜಾತಿ-ಧರ್ಮಗಳ ವೈವಿಧ್ಯಮಯ ದೇಶ. ಇದರಿಂದ, ಅದರ ವಿಕಾಸಕ್ಕೆ ಅಡ್ಡಿಯಾಗುತ್ತಿರುವುದು ಒಂದೆಡೆಯಾದರೆ ಜಾತ್ಯತೀತ ಎಂಬ ಪರಿಕಲ್ಪನೆಯನ್ನು ವಿಶ್ವಕ್ಕೆ ನೀಡುವುದು ಮತ್ತೊಂದೆಡೆ. ಗಾಂಧೀಜಿ ಅವರ ಕಲ್ಪನೆಯಲ್ಲಿ ಭಾರತವು ಸರ್ವ ಧರ್ಮಗಳ ಸಮನ್ವಯತೆಯನ್ನು ಕಾಪಾಡಿಕೊಳ್ಳುವುದೇ ಆಗಿದೆ. ದೇವರು ಒಬ್ಬನೇ. ರಾಮ, ರಹೀಂ, ಅಲ್ಲಾ ಎಲ್ಲರೂ ಒಂದೇ. ಇಂತಹ ಸಂದೇಶ ನೀಡುವುದು ಗಾಂಧೀಜಿ ಅವರ ಉದ್ದೇಶವಾಗಿತ್ತು. ಅದಕ್ಕೆಂದೇ ಅವರು ಅತ್ಯಂತ ಕೆಳಮಟ್ಟದಲ್ಲಿದ್ದ ಜನರನ್ನು ‘ಹರಿಜನರು’ ಎಂದು ಹೆಸರಿಸಿ, ಅವರೂ ಸಹ ದೇವರು ಮಕ್ಕಳು ಎಂಬ ಭಾವನೆ ಬರುವಂತೆ, ಆ ಮೂಲಕ ಸಮಾನತೆ ಬರುವಂತೆ ನೋಡಿಕೊಂಡಿದ್ದರು. ಇದು ತಮ್ಮ ಬದುಕಿನ ಕನಸೂ ಆಗಿತ್ತು. ಅದನ್ನು ಈ ದೇಶದ ಅಭಿವೃದ್ಧಿಯಲ್ಲಿ ಕಾಣಬಯಸಿದ್ದರು. ಇಂತಹ ಸಂಗತಿಗಳನ್ನು ಒಳಗೊಂಡ ಅವರ ಆತ್ಮಕಥೆಯಂತಿರುವ ಈ ಕೃತಿಯು ಕನ್ನಡಕ್ಕೆ ಸಮರ್ಪಣೆಯಾಗಿದೆ.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books