ನವಯುಗದ ಚೈತನ್ಯ

Author : ಜಿ. ರಾಮನಾಥ್ ಭಟ್

Pages 192

₹ 190.00




Year of Publication: 2021
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ನೊಬೆಲ್ ಪ್ರಶಸ್ತಿ ಪುರಸ್ಕೃತ ಡಾ. ರವೀಂದ್ರನಾಥ್ ಟ್ಯಾಗೊರ್ ಅವರು ಚೀನಾದಲ್ಲಿ ಮಾಡಿದ ಭಾಷಣಗಳನ್ನು ಸಂಗ್ರಹಿಸಿದ ಕೃತಿ. ಜಿ. ರಾಮನಾಥ ಭಟ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಭಾಷೆ, ರಾಷ್ಟ್ರೀಯತೆ, ಸಂಸ್ಕೃತಿ, ಅಧ್ಯಾತ್ಮದ ಮಹತ್ವ, ಮನುಷ್ಯತ್ವ ಹೀಗೆ ಹತ್ತು ಹಲವು ಆಯಾಮಗಳಲ್ಲಿ ಚರ್ಚಿಸಿದ ವಿಚಾರಗಳು ಇಲ್ಲಿ ಮಂಡಿತವಾಗಿವೆ.

About the Author

ಜಿ. ರಾಮನಾಥ್ ಭಟ್

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಜಿ. ರಾಮನಾಥ ಭಟ್ ಅವರು ಮೈಸೂರು ನಿವಾಸಿಯಾಗಿದ್ದಾರೆ. ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮ (1959) ಪಡೆದಿರುವ ಅವರು ಮೂರು ವರ್ಷ ಮಹಾರಾಷ್ಟ್ರದ ಕೊಯ್ನಾ ಜಲ ವಿದ್ಯುತ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದರು. 1962ರಿಂದ ಮೂವತ್ತೈದು ವರ್ಷ ಕರ್ನಾಟಕದ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ 1997ರಲ್ಲಿ ಸ್ವಯಂ ನಿವೃತ್ತರಾದರು. 1986ರಿಂದ ಕೃಷ್ಣರಾಜಸಾಗರದಲ್ಲಿರುವ ಇಂಜಿನಿಯರಿಂಗ್ ಸಿಬ್ಬಂದಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದಾರೆ. ಶಾಲಾ ದಿನಗಳಿಂದಲೂ ಸಾಹಿತ್ಯದಲ್ಲಿ ಆಸಕ್ತರಾಗಿದ್ದ ಅವರು ಅರುವತ್ತರ ದಶಕದಲ್ಲಿ ರವೀಂದ್ರನಾಥ ಠಾಕೂರರ ಸಾಹಿತ್ಯದತ್ತ ಆಕರ್ಷಿತರಾದರು. ಸರ್ಕಾರಿ ಕೆಲಸದಲ್ಲಿದ್ದರೂ ರವೀಂದ್ರನಾಥ ...

READ MORE

Related Books