ನವ್ಯತೆ

Author : ನರಹಳ್ಳಿ ಬಾಲಸುಬ್ರಹ್ಮಣ್ಯ

Pages 80

₹ 7.00




Year of Publication: 1992
Published by: ಕರ್ನಾಟಕ ಸಾಹಿತ್ಯ ಅಕಾಡೆಮಿ
Address: ಕರ್ನಾಟಕ ಸಾಹಿತ್ಯ ಅಕಾಡೆಮಿ ನೃಪತುಂಗ ರಸ್ತೆ, ಬೆಂಗಳೂರು - 560002

Synopsys

’ನವ್ಯತೆ’ ಎನ್ನುವುದು ಸಾಹಿತ್ಯಕ್ಕೆ ಸಂಬಂಧಿಸಿದಂತೆ ಒಂದು ನಿರ್ದಿಷ್ಟ ಸಾಹಿತ್ಯ ಮಾರ್ಗವನ್ನು ಸೂಚಿಸುವ, ನಿರ್ದೇಶಿಸುವ ಪರಿಕಲ್ಪನೆಯಾಗಿ ಬಳಕೆಯಲ್ಲಿದೆ.

ನವ್ಯತೆಯ ಪರಿಕಲ್ಪನೆ ಬೆಳೆದ ರೀತಿ, ಅದರ ಹಿನ್ನೆಲೆ, ಬಳಕೆ, ಕಾವ್ಯಮಾರ್ಗದಲ್ಲಿನ ನವ್ಯತೆ, ಪಾಶ್ಚಾತ್ಯ ಸಾಹಿತ್ಯದಲ್ಲಿ ನವ್ಯತೆ ಕಂಡು ಬಂದ ಬಗೆ, ಸಾಹಿತಿ ವಿ.ಕೃ.ಗೋಕಾಕ್ ಅವರ ಮಾರ್ಗದಲ್ಲಿನ ಕನ್ನಡ ಸಾಹಿತ್ಯದಲ್ಲಿ ನವ್ಯತೆಯನ್ನು ಪರಿಚಯಿಸಿರುವ ರೀತಿ, ಗೋಪಾಲಕೃಷ್ಣ ಅಡಿಗರ ನವ್ಯಮಾರ್ಗದ ವೈಶಿಷ್ಟ್ಯ,ಗಳ ಬಗ್ಗೆ ಸಂಕ್ಷಿಪ್ತವಾಗಿ ಈ ಪುಸ್ತಕ ತಿಳಿಸುತ್ತದೆ. 

ನವ್ಯ ಸಾಹಿತ್ಯದ ಪ್ರಮುಖ ಲಕ್ಷಣಗಳು, ನವ್ಯಮಾರ್ಗದಲ್ಲಿ ಕಂಡು ಬಂದ ಪ್ರಮುಖ ಲೇಖಕರು ಮತ್ತು ಅವರ ರಚನೆಗಳ ಬಗ್ಗೆ ಪ್ರಸ್ತಾಪಿಸುವ ಕೃತಿ ’ನವ್ಯತೆ’. ’ಸಾಹಿತ್ಯ ಪಾರಿಭಾಷಿಕ ಮಾಲೆ’ಯಡಿ ಪ್ರಕಟಗೊಂಡಿರುವ ’ನವ್ಯತೆ’ ಪುಸ್ತಕವು ಲೇಖಕ, ವಿಮರ್ಶಕರಾದ ನರಹಳ್ಳಿ ಬಾಲಸುಬ್ರಹ್ಮಣ್ಯ ಸಾಹಿತ್ಯ ರಚನೆಯಲ್ಲಿ ಪುಸ್ತಕ ರೂಪ ಪಡೆದುಕೊಂಡಿದೆ.

 

About the Author

ನರಹಳ್ಳಿ ಬಾಲಸುಬ್ರಹ್ಮಣ್ಯ
(05 September 1953)

ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.  ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...

READ MORE

Related Books