ನಿನ್ನಿಂದಲೇ ಅರುಣೋದಯ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 270

₹ 270.00




Year of Publication: 2022
Published by: ಸುಧಾ ಎಂಟರ್‌ಪ್ರೈಸಸ್,
Address: # 3036, 5ನೇ ಮುಖ್ಯರಸ್ತೆ, ಬಿ.ಎಸ್.ಕೆ 2ನೇ ಹಂತ, 14ನೇ ಕ್ರಾಸ್ ರೋಡ್, ತ್ಯಾಗರಾಜ ನಗರ, ಬೆಂಗಳೂರು-560070
Phone: 9845449811

Synopsys

ಖ್ಯಾತ ಕಾದಂಬರಿಗಾರ್ತಿ ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ) ಅವರ ಸಾಮಾಜಿಕ ಕಾದಂಬರಿ-ನಿನ್ನಿಂದಲೇ ಅರುಣೋದಯ. ತಾವು ಈಗಾಗಲೇ ಬರೆದ ‘ಅಗ್ನಿದಿವ್ಯ’ ಕಾದಂಬರಿಯ ಮುಂದುವರಿದ ಭಾಗವೇ ಈ ಕಾದಂಬರಿ ಎಂದು ಲೇಖಕಿ ಸಾಯಿಸುತೆ ಹೇಳಿಕೊಂಡಿದ್ದಾರೆ. ಪ್ರೇಮದ ವೈವಿಧ್ಯಮಯ ಪರಿಗಳ ಸೊಬಗನ್ನು ತೋರುವ ವಸ್ತುವನ್ನು ಒಳಗೊಂಡ ಕಾದಂಬರಿ. ಪ್ರೇಮದ ಪರಿಶುದ್ಧತೆಯನ್ನು ಸಾಮಾಜಿಕ ವಿದ್ಯಮಾನಗಳ ಚೌಕಟ್ಟಿನಲ್ಲಿಟ್ಟು, ಅದರ ಹಿರಿಮೆ-ಗರಿಮೆಗಳ ಸಂದೇಶ ನೀಡುತ್ತದೆ. ಕಾದಂಬರಿ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಕಲಾತ್ಮಕ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳು ಓದುಗರ ಗಮನವನ್ನು ಸೆಳೆಯುತ್ತವೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books